ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ ಬರ್ತ್ ಡೇ ಪಾರ್ಟಿಗೆ ಕರೆದುಕೊಂಡು ಹೋಗಿದ್ದ ಯುವಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಬಸವರಾಜ ಗುರುಲಿಂಗಪ್ಪ ಮುದ್ದಣ್ಣವರ(23) ಕೊಲೆಯಾಗಿರುವ ಯುವಕ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬರ್ತ್ ಡೇ ಪಾರ್ಟಿಗೆ ಕರೆದುಕೊಂಡು ಹೋಗಿದ್ದ ಯುವಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಬಸವರಾಜ ಗುರುಲಿಂಗಪ್ಪ ಮುದ್ದಣ್ಣವರ(23) ಕೊಲೆಯಾಗಿರುವ ಯುವಕ. ಎಂಎಸ್ಡಬ್ಲ್ಯು ವ್ಯಾಸಂಗ ಮಾಡುತ್ತಿದ್ದ ಬಸವರಾಜ, ಮಂಗಳವಾರ ರಾತ್ರಿ ಸ್ನೇಹಿತನ ಬರ್ತ್ಡೇ ಪಾರ್ಟಿಗೆ ಹೋಗಿದ್ದ. ಈ ವೇಳೆ ನಾಲ್ಕೈದು ಯುವಕರು ಹಳೆಯ ವೈಯಕ್ತಿಯ ವೈಷಮ್ಯದಿಂದ ಆತನ ಜೊತೆಗೆ ಜಗಳ ತೆಗೆದಿದ್ದಾರೆ. ಇದು ವಿಕೋಪಕ್ಕೆ ತೆರಳಿದಾಗ ಹೊಟ್ಟೆ, ಬೆನ್ನಿಗೆ ಚಾಕುವಿನಿಂದ ಚುಚ್ಚಿ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಗಾಯಾಳು ಯುವಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. ನನ್ನ ಮಗ ಯಾರ ತಂಟೆಗೂ ಹೋದವನಲ್ಲ. ಕಾಲೇಜಿನಲ್ಲಿ ಚಿನ್ನದ ಪದಕ ಪಡೆದಿದ್ದಾನೆ. ಬರ್ತ್ ಡೇ ಪಾರ್ಟಿಗೆ ಹೋಗುತ್ತಾನೆ ಎಂದಿದ್ದರೇ ನಾವು ಕಳಿಸುತ್ತಿರಲಿಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹೇಳುತ್ತ ಮಗನ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಮೃತ ಯುವಕನ ತಾಯಿ ಒತ್ತಾಯಿಸಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.