ಬೆಳ್ತಂಗಡಿ: ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ. 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ಫೆ 1.ರಂದು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರದ ಶಿವಪ್ರಸಾದ್ ಅಜಿಲರು ಬಿಡುಗಡೆ

ಬೆಳ್ತಂಗಡಿ: ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ. 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ಫೆ 1.ರಂದು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರದ ಶಿವಪ್ರಸಾದ್ ಅಜಿಲರು ಬಿಡುಗಡೆಗೊಳಿಸಿದರು.

ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್‍ಯಾಧ್ಯಕ್ಷ ಮಹಾವೀರ ಜೈನ್, ಜಗದೀಶ್ ಅಂಚನ್, ಶ್ರೀನಿವಾಸ ವಾಸುದೇವ ಕಿಣಿ, ಪ್ರಧಾನ ಅರ್ಚಕ ವೇ.ಮೂ. ಕೃಷ್ಣತಂತ್ರಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ ಹೆಗ್ಡೆ, ಎನ್. ದಿವಾಕರ ಭಂಡಾರಿ, ಲಕ್ಷ್ಮಣ್ ಬಂಗೇರ, ಶಂಕರ್ ತುಂಬೆಗುಡ್ಡೆ, ಯಶೋಧ, ರಶ್ಮಿ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ಈದು, ಪ್ರಮುಖರಾದ ಡಾ. ಪ್ರಸಾದ್ ಶೆಟ್ಟಿ, ಕಲಶ ಸಮಿತಿ ಸಂಚಾಲಕ ಪ್ರಮೋದ್‌ ಕುಲಾಲ್, ಈದು ಗ್ರಾಪಂ ಅಧಕ್ಷ ಸದಾನಂದ ಪುಜಾರಿ, ಪ್ರಚಾರ ಸಮಿತಿ ಸಂಚಾಲಕ ಸಂಪತ್ ಜೈನ್, ಸಹ ಸಂಚಲಕ ಸಂತೋಷ್ ಶೆಟ್ಟಿ ಇಂಚರ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖರು, ಸದಸ್ಯರು, ಭಾನು ಬಾಸ್ಕರ, ನಯಾನ ಈದು, ಸೇಸಪ್ಪ ಪೂಜಾರಿ ಉಚ್ಚೂರು, ದೀರಜ್ ಹೆಗ್ಡೆ ಹಾಗೂ ಸಮಿತಿ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.