ಕನ್ನಡಪ್ರಭ ವಾರ್ತೆ ತುಮಕೂರು

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಜಿಲ್ಲಾ ಕದಳಿ ಮಹಿಳಾ ವೇದಿಕೆ, ಜಿಲ್ಲಾ ಕಸಾಪ ಇವರ ಸಂಯುಕ್ತಾಶ್ರಯದಲ್ಲಿ ಬಸವೇಶ್ವರ ಜಯಂತಿ ಹಾಗೂ ವಚನ ಸಾಹಿತ್ಯ ವಿಚಾರ ಸಂಕಿರಣದ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಸಾನಿಧ್ಯವನ್ನು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮಿಗಳು ವಹಿಸಿದ್ದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಅಖಿಲ ಭಾರತ ಶ.ಸಾ.ಪ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಕದಳಿ ಮಹಿಳಾ ವೇದಿಕೆಯ ರಾಜ್ಯ ಸಂಚಾಲಕರಾದ ಸುಶೀಲ ಸೋಮಶೇಖರ್, ಜಿಲ್ಲಾ ಶ.ಸಾ.ಪ. ಅಧ್ಯಕ್ಷ ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ, ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ವೀರಶೈವ ಸಮಾಜದ ಅಧ್ಯಕ್ಷ ಕೋರಿ ಮಂಜುನಾಥ್, ಕದಳಿ ಮಹಿಳಾ ವೇದಿಕೆ ಅಧ್ಯಕ್ಷರಾದ ಶಿವಲಿಂಗಮ್ಮ, ಸ್ಪೂರ್ತಿ ಡೆವಲಪರ್ಸ್‌ನ ಎಸ್.ಪಿ.ಚಿದಾನಂದ್, ಬ್ಯಾಡನೂರು ಚನ್ನಬಸವಣ್ಣ, ವಿಜಯಮ್ಮ, ಡಾ.ಬಿ.ನಂಜುಂಡಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬ್ಯಾಡನೂರು ಚನ್ನಬಸವಣ್ಣ, ಪೌಳಿ ಶಂಕರಾನಂದಪ್ಪ, ವಿಜಯಮ್ಮ, ಜಯಂತಿ ಚಿತ್ತರಂಜನ್ ಡಾ.ಬಿ.ನಂಜುಂಡಸ್ವಾಮಿ, ರಾಗಿಣಿ, ವಚನಶ್ರೀ ಪ್ರಶಸ್ತಿ ಪುರಸ್ಕೃತ ರುದ್ರಮೂರ್ತಿ ಎಲೆರಾಂಪುರ, ಕದಳಿಶ್ರೀ ಪ್ರಶಸ್ತಿ ಪುರಸ್ಕೃತರಾದ ಅಮೃತ ವೀರಭದ್ರಯ್ಯ ಅವರುಗಳನ್ನು ಸನ್ಮಾನಿಸಲಾಯಿತು.