ಸಾರಾಂಶ
ಕನ್ನಡಪ್ರಭವಾರ್ತೆ ಹೊಸಕೋಟೆಪ್ರಸ್ತುತ ಸನ್ನಿವೇಶದಲ್ಲಿ ವೃಕ್ಷ ಸಂಪತ್ತನ್ನು ವೃದ್ದಿಸುವ ದೊಡ್ಡ ಜವಾಬ್ದಾರಿ ದೇಶದ ಪ್ರತಿಯೊಬ್ಬ ನಾಗರಿಕರನ ಮೇಲಿದೆ ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ದೇವರಾಜ್ ತಿಳಿಸಿದರು.ನಗರದ ಜಿಕೆಬಿಎಂಎಸ್ ಶಾಲೆ ಆವರಣದಲ್ಲಿ ನಗರಸಭೆ ವತಿಯಿಂದ ಆಯೋಜನೆ ಮಾಡಲಾಗಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.ನಗರಸಭೆ ವತಿಯಿಂದ ಆಯೋಜನೆ ಮಾಡಲಾಗಿರುವ ಪರಿಸರ ದಿನಾಚರಣೆ ಪ್ರಯುಕ್ತ ನನ್ನ ತಾಯಿಯ ಹೆಸರಿನಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದ್ಧೇನೆ. ನಗರಸಭೆ ಅಧ್ಯಕ್ಷ, ಸಿಬ್ಬಂದಿ ಕೂಡ ತಮ್ಮ ತಾಯಿಯ ಹೆಸರಿನಲ್ಲಿ ಗಿಡ ನೆಟ್ಟು ಪೋಷಣೆ ಮಾಡಬೇಕಿದೆ. ಪ್ರಮುಖವಾಗಿ ಆಧುನಿಕತೆಗೆ ಹೊಂದಿಕೊಳ್ಳುತ್ತಿರುವ ಮನುಷ್ಯ ರಸ್ತೆ ನಿರ್ಮಾಣ, ಮನೆ ನಿರ್ಮಾಣ ಸೇರಿದಂತೆ ಅಭಿವೃದ್ದಿ ಕಾರ್ಯಗಳಿಗೆ ವೃಕ್ಷ ಸಂಪತ್ತನ್ನು ನಾಶ ಮಾಡುತ್ತಿದ್ದಾನೆ. ಆದ್ದರಿಂದ ಜವಾಬ್ದಾರಿ ಅರಿತು ಮುಂದಿನ ಪೀಳಿಗೆಗೆ ವೃಕ್ಷ ಸಂಪತ್ತನ್ನು ಆಸ್ತಿಯನ್ನಾಗಿ ಮಾಡಿ ಬಳುವಳಿಯಾಗಿ ಕೊಡಬೇಕು ಎಂದರು.ನಗರಸಭೆ ಪೌರಾಯುಕ್ತ ನೀಲಲೋಚನ ಪ್ರಭು ಮಾತನಾಡಿ, ವಿಶ್ವ ಪರಿಸರ ದಿನ ಎನ್ನುವುದು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಮೂಲಕ ಪ್ರತಿ ಮನೆಯಂಗಳದಲ್ಲಿ ಗಿಡ ನೆಟ್ಟು ಪೋಷಿಸುವ ಜವಾಬ್ದಾರಿ ಹೊಂದಬೇಕು. ಆಗ ಮಾತ್ರ ಗಿಡ ಮರಗಳ ಸಂಖ್ಯೆ ಹೆಚ್ಚಿಸಿ ಶುದ್ದ ಆಮ್ಲಜನಕ ಉಸಿರಾಡಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ನಗರಸಭೆ ಜಾಗೃತಿಗೆ ಕಾರ್ಯಕ್ರಮ ರೂಪಿಸಲಾಗುವುದು. ಗಿಡ ಮರಗಳ ವೃದ್ದಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇವೆ ಎಂದರು.ನಗರಸಭೆ ಅಧ್ಯಕ್ಷೆ ಆಶಾ, ಉಪಾಧ್ಯಕ್ಷ ಸಿಪಿಎನ್ ನವೀನ್, ಡಿವೈಎಸ್ಪಿ ಮಲ್ಲೇಶಯ್ಯ, ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದ್, ಮುಖಂಡರಾದ ವರದಾಪುರ ಆನಂದ್ ಹಾಜರಿದ್ದರು.