ಪಾಲಿಕೆ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಕರವೇ ಕಾರ್ಯಕರ್ತರು; ಪೊಲೀಸ್ ವಶಕ್ಕೆಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದ ವೇಳೆ ಮಹಾರಾಷ್ಟ್ರ ಸಚಿವ ಶಿವೇಂದ್ರ ರಾಜೇ ಬೋಸಲೆ ಜೈ ಮಹಾರಾಷ್ಟ್ರ ಘೋಷಣೆ ಕೂಗಿದರೂ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ, ಮೇಯರ್ ಸವಿತಾ ಕಾಂಬಳೆ ಸೇರಿ ಇತರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುರುವಾರ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.