100 ಟನ್ ಬೆಳೆದ ರೈತನಿಗೆ ಸನ್ಮಾನಚಿಕ್ಕೋಡಿ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಕಾರ್ಖಾನೆ ರೈತ ಸದಸ್ಯ, ಕೇರೂರ ಗ್ರಾಮದ ರೈತ ಮಹಾಂತೇಶ ಅಪ್ಪಾಸಾಬ ಕಾನಡೆ ಅವರು ಕಾರ್ಖಾನೆ ಕಬ್ಬು ಅಭಿವೃದ್ಧಿ ವಿಭಾಗದ ಮಾರ್ಗದರ್ಶನ ಹಾಗೂ ಕಿಸಾನ್ ಬಜಾರ್ದ ಸೌಲಭ್ಯಗಳ ಉಪಯೋಗ ಪಡೆದು 2024-25ರ ಸಾಲಿನಲ್ಲಿ ಎಕರೆಗೆ 100 ಟನ್ ಕಬ್ಬು ಬೆಳೆದ ಹಿನ್ನೆಲೆ ಕಾರ್ಖಾನೆ ಆಡಳಿತ ಮಂಡಳಿ ಪರವಾಗಿ ಈಚೆಗೆ ಪ್ರಧಾನ ವ್ಯವಸ್ಥಾಪಕ ಎನ್.ಎಸ್. ಹಿರೇಮಠ ಕಬ್ಬು ಬೆಳೆದ ತೋಟಕ್ಕೆ ಭೇಟಿ ನೀಡಿ ರೈತನನ್ನು ಅಭಿನಂದಿಸಿದರು.