• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಲೋಳಿ ಬಸವೇಶ್ವರ ಸಂಘಕ್ಕೆ ₹3.88 ಕೋಟಿ ಲಾಭ
ಕಲ್ಲೋಳಿಯ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘ 2023-24ನೇ ಆರ್ಥಿಕ ವರ್ಷದ ಕೊನೆಯಲ್ಲಿ 3.88 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬೆಳಕೂಡ ಹೇಳಿದರು.
ಹಾಲು ವ್ಯರ್ಥ ಮಾಡದೆ ಮಕ್ಕಳಿಗೆ, ರೋಗಿಗಳಿಗೆ ನೀಡಿ: ಮುರುಘರಾಜೇಂದ್ರ ಸ್ವಾಮೀಜಿ
ಪೌಷ್ಟಿಕ ಆಹಾರವಾದ ಹಾಲನ್ನು ವ್ಯರ್ಥ ಮಾಡದೆ ಮಕ್ಕಳಿಗೆ, ರೋಗಿಗಳಿಗೆ ನೀಡುವ ಮೂಲಕ ಬಸವ ಪಂಚಮಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಇಲ್ಲಿನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಪ್ರಗತಿಪರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ಕನ್ನಡಪ್ರಭ ವಾರ್ತೆ ಯಮಕನಮರಡಿ ಸಮಾಜದಲ್ಲಿ ಅಂಧಶ್ರದ್ಧೆ, ಮೂಢನಂಬಿಕೆಗಳು ನಿರಂತರವಾಗಿ ನಡೆಯಬೇಕು ಎಂದು ಕೆಲವರು ನಿಲುವು ಹೊಂದಿದ್ದಾರೆ. ನಾಗರಪಂಚಮಿಯ ವೈಚಾರಿಕ ನೆಲೆಗಟ್ಟಿನ ಮೇಲೆ ಬಸವ ಪಂಚಮಿಯನ್ನಾಗಿ ಆಚರಿಸಬೇಕು ಎಂದು ಮಾನವ ಬಂಧುತ್ವ ಸಂಚಾಲಕ ವಿಠ್ಠಲ ಮಾದರ ಹೇಳಿದರು.
ಅಥಣಿಯಲ್ಲಿ ಕಳೆಗಟ್ಟಿದ ನಾಗಪಂಚಮಿ
ಕನ್ನಡಪ್ರಭ ವಾರ್ತೆ ಅಥಣಿ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಅಥಣಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಯಿತು. ಅಥಣಿ ಸಿದ್ದೇಶ್ವರ ದೇವಸ್ಥಾನದ ಹತ್ತಿರದ ನಾಗ ಮಂದಿರದಲ್ಲಿ ನಾಗದೇವತೆಗೆ ವಿಶೇಷ ಪೂಜೆ, ರುದ್ರಾಭಿಷೇಕ, ಹಾಲು ಎರೆಯುವ ಮೂಲಕ ಮಹಿಳೆಯರು ಮಕ್ಕಳು ಪೂಜೆ ಸಲ್ಲಿಸಿದರು. ಹೊಸ ಉಡುಗೆಗಳನ್ನು ತೊಟ್ಟು ನಾಗ ದೇವರಿಗೆ ಸಂಪ್ರದಾಯದಂತೆ ಹಾಲೆರೆದು, ಎಳ್ಳು, ಉಂಡಿ, ಕಡುಬು, ಹೋಳಿಗೆ ತಯಾರಿಸಿ ನೈವೇದ್ಯ ಸಮರ್ಪಿಸಿದರು.
ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಆರೋಪಿ ಸೆರೆ
ಕನ್ನಡಪ್ರಭ ವಾರ್ತೆ ಬೆಳಗಾವಿಕಳ್ಳತನ ಪ್ರಕರಣ ಸಂಬಂಧ ಮಾಳಮಾರುತಿ ಪೊಲೀಸರು ಅಂತಾರಾಜ್ಯ ಕಳ್ಳನನ್ನು ಬಂಧಿಸಿದ್ದು, ಆತನಿಂದ ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆಯ ಕಮಲಾಪುರ ಗ್ರಾಮದ ಹಾಲಿ ಸೊಲ್ಲಾಪುರದ ನಾಗರಾಜ ಸುಭಾಷ ಕಚೇರಿ (39) ಬಂಧಿತ ಆರೋಪಿ. ಮಹಾಂತೇಶ ನಗರ, ಆಂಜನೇಯ ನಗರ ಮತ್ತು ಶಿವಬಸವ ನಗರಗಳಲ್ಲಿ ಕಳ್ಳತನ ಪ್ರಕರಣದಲ್ಲಿ ಈತ ಭಾಗಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ.
ಹತ್ತಿ ಮೇಲಿನ ಸೆಸ್‌,ಜಿಎಸ್‌ಟಿ ತೆಗೆದು ಹಾಕಿ
ಕನ್ನಡಪ್ರಭ ವಾರ್ತೆ ಮೂಡಲಗಿ ಭಾರತ ಹತ್ತಿ ಉತ್ಪಾದನೆಯಲ್ಲಿ ಸಾವಲಂಬನೆ ಸಾಧಿಸಲು ಹತ್ತಿಯ ಮೇಲೆ ಈಗಿರುವ ಎಪಿಎಂಸಿ ಸೆಸ್ ಮತ್ತು ಜಿಎಸ್‌ಟಿಯನ್ನು ತೆಗೆದು ಹಾಕಬೇಕು. ಜೊತೆಗೆ ವಿದೇಶಗಳಿಂದ ಕಚ್ಚಾ ಹತ್ತಿ ಆಮದು ನಿಷೇಧಿಸಿ ರೈತರ ಗಂಭೀರ ಸಮಸ್ಯೆ ಎದುರಿಸುತ್ತಿರುವ ಹತ್ತಿ ಬೆಳಗಾರ ರೈತರ ಹಿತ ಕಾಪಾಡಬೇಕು. ಜೊತೆಗೆ 4000 ಹತ್ತಿ ಜಿನ್ನಿಂಗ್ ಸಂಬಂಧಿತ ಸಣ್ಣ ಕೈಗಾರಿಕೆಗಳು, 3000 ನೂಲುವ ಗಿರಿಣಿಗಳು ಸೇರಿ ದೇಶಿ ಜವಳಿ ಉದ್ಯಮವನ್ನು ರಕ್ಷಿಸಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಹಿರಣ್ಯಕೇಶಿ ನದಿಗೆ ಬಾಗಿನ ಅರ್ಪಣೆ
ಕನ್ನಡಪ್ರಭ ವಾರ್ತೆ ಹುಕ್ಕೇರಿ ಸಹ್ಯಾದ್ರಿ ಪರ್ವತ ಶ್ರೇಣಿಯಲ್ಲಿ ಸುರಿಯುತ್ತಿರುವ ರಭಸದ ಮಳೆಯಿಂದ ಮೈದುಂಬಿ ಹರಿಯುತ್ತಿರುವ ಹಿರಣ್ಯಕೇಶಿ ನದಿಗೆ ತಾಲೂಕಿನ ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯಿಂದ ಶುಕ್ರವಾರ ಬಾಗಿನ ಅರ್ಪಿಸಲಾಯಿತು. ಕಾರ್ಖಾನೆ ನಿರ್ದೇಶಕ ಸುರೇಶ ಬೆಲ್ಲದ ದಂಪತಿ ಅವರು ಧಾರ್ಮಿಕ ವಿಧಿ-ವಿಧಾನದೊಂದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ನಿರ್ದೇಶಕರಾದ ಶಿವಪುತ್ರ ಶಿರಕೋಳಿ, ಪ್ರಭುದೇವ ಪಾಟೀಲ, ಬಾಬಾಸಾಹೇಬ ಅರಬೋಳೆ ಇತರರು ಇದ್ದರು.
ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ನಿರ್ದಾಕ್ಷಿಣ್ಯ ಕ್ರಮ
ಕನ್ನಡಪ್ರಭ ವಾರ್ತೆ ಹುಕ್ಕೇರಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ನೇತೃತ್ವದ ತಂಡ ವಿವಿಧ ಕಡೆಗಳಲ್ಲಿ ಭೇಟಿ ನೀಡಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಅತಿವೃಷ್ಟಿ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ದುಡಗುಂಟಿ ಅವರು, ಸಂತ್ರಸ್ಥರು ಸೇರಿದಂತೆ ಜನ ಹಾಗೂ ಜಾನುವಾರುಗಳ ಬಗ್ಗೆ ಮುಂಜಾಗೃತಾ ಕ್ರಮ ವಹಿಸಬೇಕು. ಈ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.
ಸಮಾಜದ ಅಭಿವೃದ್ಧಿಗೆ ಶಿಕ್ಷಣದ ಪಾತ್ರ ಮುಖ್ಯ
ಕನ್ನಡಪ್ರಭ ವಾರ್ತೆ ಅಥಣಿ ಸಮಾಜ ಹಾಗೂ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಜೀವನದ ಯಶಸ್ಸಿಗೆ ಶಿಕ್ಷಣ ಅಡಿಪಾಯ ಹಾಕುತ್ತದೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಸದಾಶಿವ ಬುಟಾಳಿ ಹೇಳಿದರು. ಪಟ್ಟಣ ಹೊರವಲಯದ ಹುದ್ದಾರ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಉಚಿತ ದೊರಕಬೇಕಾದ ಶಿಕ್ಷಣ ಇಂದು ದುಬಾರಿಯಾಗುತ್ತಿದೆ. ಗ್ರಾಮೀಣ ಮತ್ತು ಬಡ ಮಕ್ಕಳಿಗೆ ಅತ್ಯಂತ ಕಡಿಮೆ ದರದಲ್ಲಿ ಒಳ್ಳೆಯ ಶಿಕ್ಷಣ ಒದಗಿಸುತ್ತಿರುವ ಹುದ್ದಾರ ಶಿಕ್ಷಣ ಸಂಸ್ಥೆಯ ಕಾಯಕ ಶ್ಲಾಘನೀಯ ಎಂದರು.
ಹುತ್ತಕ್ಕೆ ಹಾಕುವ ಹಾಲನ್ನು ಹಸಿದ ಮಕ್ಕಳಿಗೆ ನೀಡಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಕಲ್ಲಿ‌ನ ನಾಗರಕ್ಕೆ, ಹುತ್ತಕ್ಕೆ ಹಾಲು ಹಾಕಿ ಮಣ್ಣು ಪಾಲು ಮಾಡುವ ಬದಲು ಆ ಹಾಲನ್ನು ಮಕ್ಕಳಿಗೆ, ಹಸಿದವರಿಗೆ ನೀಡಿ ಎಂದು ಸತೀಶ್‌ ಶುಗರ್ಸ್‌ ನಿರ್ದೇಶಕ, ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಕಣಬರಗಿಯ ಮಹೇಶ ಫೌಂಡೇಶನ್‌ನಲ್ಲಿ ಶುಕ್ರವಾರ ಮಾನವ ಬಂಧುತ್ವ ವೇದಿಕೆ ಹಾಗೂ ಬಸವಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ, ರಾಷ್ಟ್ರೀಯ ಬಸವದಳ ಮತ್ತು ಬಸವ ಕಾಯಕ ಜೀವಿಗಳ ಸಂಘ ಹಾಗೂ ಮಹೇಶ ಫೌಂಡೇಶನ್‌ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 392
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved