ಯಕ್ಸಂಬಾದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ಸಭೆಮುಂಬರುವ ಅಕ್ಟೋಬರ್ 19 ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮಾಜಿ ಸಂಸದ ಜೊಲ್ಲೆಯವರ ಯಕ್ಸಂಬಾ ಬ್ಯಾಂಕಿನಲ್ಲಿ ಮಂಗಳವಾರ ಸಭೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಬಿಡಿಸಿಸಿ ಬ್ಯಾಂಕಿನ ಚುನಾವಣೆಯು ನಡೆಯಲಿದೆ.