• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸ್ ಬಿಡಲು ವಿದ್ಯಾರ್ಥಿಗಳ ಮನವಿ
ಮೂಡಲಗಿ: ತಾಲೂಕಿನ ತಿಗಡಿ ಗ್ರಾಮಕ್ಕೆ ಸಮರ್ಪಕ ಬಸ್ ಸಂಚಾರಕ್ಕೆ ಆಗ್ರಹಿಸಿ ಗೋಕಾಕ್ ಬಸ್ ನಿಲ್ದಾಣದ ನಿಲ್ದಾಧಿಕಾರಿ ಕೆ.ವಿ.ಜಮಾದಾರ್‌ಗೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಮನವಿ ಸಲ್ಲಿಸಿದರು. ಗೋಕಾಕ ನಗರದ ಕಾಲೇಜುಗಳಿಗೆ ತಿಗಡಿ, ಸುಣಧೋಳಿ, ತಳಕಟ್ನಾಳ, ಕಂಡರಟ್ಟಿ ತೋಟದ ಸುಮಾರು 60 ರಿಂದ 70 ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಹೋಗುತ್ತಾರೆ.
ಮಕ್ಕಳ ಹಿತಾಸಕ್ತಿ, ಒಳಿತಿಗಾಗಿ ಪೋಕ್ಸೋ ಕಾಯ್ದೆ
ಕನ್ನಡಪ್ರಭ ವಾರ್ತೆ ಅಥಣಿ ಪೋಕ್ಸೋ ಕಾಯ್ದೆಯನ್ನು ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಕೃತ್ಯಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಈ ಕಾಯಿದೆಯನ್ನು ಜಾರಿಗೆ ತರಲಾಗಿದೆ ಎಂದು ಹಿರಿಯ ನ್ಯಾಯವಾದಿ ಬಾಹುಸಾಹೇಬ ಕಾಂಬಳೆ ಹೇಳಿದರು.
ನದಿ ಪಾತ್ರದ ಪ್ರದೇಶಗಳಲ್ಲಿ ಡಿಸಿ ಪರಿಶೀಲನೆ
ಕನ್ನಡಪ್ರಭ ವಾರ್ತೆ ಬೆಳಗಾವಿನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿ ಪಾತ್ರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬೆಳಗಾವಿ ತಾಲೂಕಿನ ಸುತಗಟ್ಟಿ ಬಳಿಯ ಘಟಪ್ರಭಾ ನದಿಯ ಸೇತುವೆ ಬಳಿ ನದಿಯ‌ ಒಳಹರಿವು ಪ್ರಮಾಣ ಹಾಗೂ ಪ್ರಸ್ತುತ ನೀರಿನ ಪ್ರಮಾಣದ ಬಗ್ಗೆ ಅಧಿಕಾರಿಗಳಿಂದ‌ ಮಾಹಿತಿ ಪಡೆದುಕೊಂಡರು.
ಜಿಲ್ಲೆಯಲ್ಲಿ ಸದ್ಯ ಪ್ರವಾಹ ಪರಿಸ್ಥಿತಿ ಇಲ್ಲ: ಡಿಸಿ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಬೆಳಗಾವಿ ಜಿಲ್ಲೆಯಲ್ಲಿ ಸದ್ಯ ಯಾವುದೇ ಪ್ರವಾಹದ ಪರಿಸ್ಥಿತಿ ಉಂಟಾಗಿಲ್ಲ. ಮಹಾರಾಷ್ಟ್ರ ಹಾಗೂ ರಾಜ್ಯದ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆಗೆ ಮಾತುಕತೆ ಮಾಡಿದ್ದಾಗಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ತಿಳಿಸಿದ್ದಾರೆ. ತಾಲೂಕಿನ ಮಾಂಜರಿ ಸೇತುವೆ ಬಳಿ ಕೃಷ್ಣಾ ನದಿ ತೀರದ ಹರಿವಿನ ಮಟ್ಟ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಮಾಹಿತಿ ನೀಡಿದರು. ರಾಜ್ಯದ ಜಲಾಶಯ ಹಾಗೂ ಮಹಾರಾಷ್ಟ್ರದ ಜಲಾಶಯಗಳು ಅರ್ಧದಷ್ಟು ಮಾತ್ರ ತುಂಬಿವೆ.
ಹಸೇನ್, ಹುಸೇನರ ಸ್ಮರಿಸುವ ಮೊಹರಂ ಹಬ್ಬ
ಕನ್ನಡಪ್ರಭ ವಾರ್ತೆ ಬೆಳಗಾವಿ ತ್ಯಾಗ, ಬಲಿದಾನಗಳ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಬೆಳಗಾವಿ ನಗರದಲ್ಲಿ ಬುಧವಾರ ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು. ಈ ಹಬ್ಬವನ್ನು ಹಿಂದು-ಮುಸ್ಲಿಂ ಮತ್ತು ಇತರೆ ಸಮುದಾಯದವರು ಒಟ್ಟಿಗೆ ಸೇರಿ ಆಚರಿಸಿ, ಸೌಹಾರ್ದತೆ ಮೆರೆದರು.
ಪಾಶ್ಚಾಪುರದಲ್ಲಿ ಮೊಹರಂ ಮುಲಾಖಾತ್‌ ವೇಳೆ ವಾಗ್ವಾದ
ಯಮಕನಮರಡಿ: ಪಾಶ್ಚಾಪುರ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಮೊಹರಂ ನಿಮಿತ್ತ 6 ತಾಬೂತ್‌ ಹಾಗೂ ಬೇಬಿ ಫಾತಿಮಾ ದೇವರು (ಮುಲಾಖಾತ್‌) ಭೇಟಿಯ ಸಣ್ಣ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಪೊಲೀಸರು ಲಾಠಿ ಬೀಸಿ ಗುಂಪನ್ನು ಚದುರಿಸಿದ ಘಟನೆ ನಡೆದಿದೆ.
ನದಿಗಳ ನೀರು ಹೆಚ್ಚಳ; ಐದು ಸೇತುವೆಗಳು ಜಲಾವೃತ
ಮಹಾರಾಷ್ಟ್ರದ ಕೊಂಕಣ ಭಾಗದದಲ್ಲಿ ವ್ಯಾಪಕವಾಗಿ ಮಳೆ ಸುರಿದ ಪರಿಣಾಮ ರಾಜ್ಯದ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆಯಾಗಿದೆ.
ಭ್ರೂಣಲಿಂಗ ಪತ್ತೆ: ಗೋಕಾಕದ ಇಕ್ರಾ ಹೆರಿಗೆ ಆಸ್ಪತ್ರೆ ಸೀಜ್‌
ಅನಧಿಕೃತವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ನಗರದ ಖಾಸಗಿ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಸೋಮವಾರ ದಾಳಿ ಮಾಡಿ ಭ್ರೂಣ ಪತ್ತೆ ಮಾಡುವ ಮಷಿನ್ ಸೇರಿದಂತೆ ಆಸ್ಪತ್ರೆಯನ್ನು ಸೀಜ್ ಮಾಡಿದೆ.
ನಿಡಸೋಸಿ ಗ್ರಾಮ ಲೆಕ್ಕಾಧಿಕಾರಿ ಮೇಲೆ ಹಲ್ಲೆ?
ವಾರಸಾ ದಾಖಲಿಸುವ ವಿಚಾರವಾಗಿ ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮ ಲೆಕ್ಕಾಧಿಕಾರಿ (ಗ್ರಾಮ ಆಡಳಿತ ಅಧಿಕಾರಿ) ಎಸ್.ಫಕಿರೇಶ ಅವರ ಮೇಲೆ ಅದೇ ಗ್ರಾಮದ ಮುಲ್ತಾನಿ ಎನ್ನುವವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ತೇರು ಎಳೆಯುವುದರಿಂದ ಭಾವೈಕ್ಯತೆಯ ಕೊಂಡಿ ಬೆಸುಗೆ
ತೇರು ಎಳೆಯುವುದರಿಂದ ಮನಸ್ಸುಗಳು ಒಂದುಗೂಡಲಿದ್ದು, ಸಮಾನತೆಯ ಭಾವನೆ ಮೂಡಲಿದೆ, ಭಾವೈಕ್ಯತೆಯ ಕೊಂಡಿ ಗಟ್ಟಿಯಾಗಲಿದೆ ಎಂದು ತುಬಚಿಯ-ನಾಗೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 432
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved