• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಯ ಅಬ್ಬರ ತಗ್ಗಿದರೂ ನದಿಯ ನೀರು ಏರಿಕೆ
ಹುಕ್ಕೇರಿ ತಾಲೂಕಿನ ಹಿಡಕಲ್‌ ಜಲಾಶಯದ ಹಿನ್ನೀರಿನಲ್ಲಿ ಹುಣ್ಣೂರ ಗ್ರಾಮದ ಹೊರವಲಯದ ವಿಠ್ಠಲ ಮಂದಿರ ಮುಳುಗಡೆಯಾಗಿದೆ.
ಮನೆಯ ಬಾಗಿಲು ಮುರಿದು ಚಿನ್ನಾಭರಣ, ನಗದು ದೋಚಿದ ಕಳ್ಳರು
ಚನ್ನಮ್ಮನ ಕಿತ್ತೂರು ಪಟ್ಟಣದ ವಿದ್ಯಾಗಿರಿಯಲ್ಲಿನ ಮನೆಯೊಂದಕ್ಕೆ ಸೋಮವಾರ ಸಂಜೆ ಕನ್ನ ಹಾಕಿರುವ ಕಳ್ಳರು ಚಿನ್ನಾಭರಣ, ಬೆಳ್ಳಿ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.
ಶಿವಸಾಗರ ಸಕ್ಕರೆ ಕಾರ್ಖಾನೆ ಎದುರು ರೈತರ ಪ್ರತಿಭಟನೆ
ತಾಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಬೇರೆಯವರಿಗೆ ಮಾರಾಟ ಮಾಡಿರುವ ಕ್ರಮ ಖಂಡಿಸಿ ರೈತರು ಧರಣಿ ಮುಂದುವರಿಸಿದ್ದು, ಸೋಮವಾರವೂ ಧರಣಿ ನಡೆಸಿದರು. ಕಾರ್ಖಾನೆಗೆ ಷೇರು ನೀಡಿದ ಷೇರುದಾರರಿಗೆ ನ್ಯಾಯ ಒದಗಿಸಿಕೊಡಬೇಕು. ಕಬ್ಬು ಪೂರೈಕೆ ಮಾಡಿದ ರೈತರಿಗೆ ಬಾಕಿ ಬಿಲ್‌ಪಾವತಿ ಮಾಡಬೇಕು. ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಮರು ನೇಮಕ ಮಾಡಿಕೊಳ್ಳಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.
ದಾಖಲಾಗುವ ಮೊದಲೇ ನ್ಯಾಯ ಒದಗಿಸುವ ಪ್ರಯತ್ನ ಮಾಡಿ
ಲೋಕ ಅದಾಲತ್ ಮಾದರಿಯಲ್ಲಿ ಪ್ರಕರಣಗಳು ದಾಖಲಾಗುವ ಮೊದಲೇ ನ್ಯಾಯ ಒದಗಿಸುವ ಪ್ರಯತ್ನ ಮಾಡಬೇಕು ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾ.ಕೆ.ಎಸ್.ಮುದುಗಲ್‌ ಹೇಳಿದರು.
ಗೋವಾ ಬಸ್‌ ತಡೆದು ಆಕ್ರೋಶ
ಕನ್ನಡಪ್ರಭ ವಾರ್ತೆ ಬೆಳಗಾವಿ ಗೋವಾ ಸರ್ಕಾರದ ಮಾತು ಕೇಳಿ ಕೇಂದ್ರದ ಪ್ರವಾಹ್‌ ತಂಡ ಮಹದಾಯಿ ಜಲಾನಯನ ಪ್ರದೇಶ ಕಣಕುಂಬಿಗೆ ಭೇಟಿ ನೀಡಿದ್ದನ್ನು ಖಂಡಿಸಿ ಸೋಮವಾರ ನಗರದಲ್ಲಿ ರೈತ ಮುಖಂಡರು, ಕರವೇ ಕಾರ್ಯಕರ್ತರು ಅರಬೆತ್ತಲೆ ಪ್ರತಿಭಟನೆ ನಡೆಸಿ ಗೋವಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಆರೋಗ್ಯ ಸೇವೆ ನೀಡುವ ಆಸ್ಪತ್ರೆಗಿಲ್ಲ ವೈದ್ಯರು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಆರೋಗ್ಯ ಕಾಪಾಡಲು ಸಾಕಷ್ಟು ಅನುದಾನ ನೀಡಿ ಆಸ್ಪತ್ರೆ ನಿರ್ಮಾಣ ಮಾಡಿವೆ. ಆದರೆ, ಆಸ್ಪತ್ರೆಗೆ ವೈದ್ಯರನ್ನು ನೇಮಕ ಮಾಡಿದರೆ ಮಾತ್ರ ಸರ್ಕಾರಿ ಅನುದಾನ ಸದ್ಬಳಕೆಯಾಗಲು ಸಾಧ್ಯ. ಆದರೆ, ರಾಮದುರ್ಗದಲ್ಲಿ ಮಾತ್ರ ಸರ್ಕಾರ ಆರೋಗ್ಯದ ವಿಷಯದಲ್ಲಿ ವಿಫಲವಾಗಿದೆ ಎನ್ನಲು ಇಲ್ಲಿಯ ರಾಮದುರ್ಗದ ಸರ್ಕಾರಿ ಆಸ್ಪತ್ರೆಯೇ ಉದಾಹರಣೆಯಂತಿದೆ.
ಸಂಸದೆ ಪ್ರಿಯಾಂಕಾಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ
ಕನ್ನಡಪ್ರಭ ವಾರ್ತೆ ಬೆಳಗಾವಿ ಚಿಕ್ಕೋಡಿ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಬೆಳಗಾವಿಯಲ್ಲಿ ಸೋಮವಾರ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು. ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಅವರನ್ನು ನಗರದ ಕಾಂಗ್ರೆಸ್‌ ಭವನದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕಾರ್ಯಕರ್ತರು, ಅಭಿಮಾನಿಗಳು ಅವರ ಪರ ಘೋಷಣೆ ಕೂಗಿದರು. ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಕಾಲುವೆ ಸೈಪನ್ ದುರಸ್ತಿಗಾಗಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಮುನವಳ್ಳಿ ಶಿಂದೋಗಿ ಕ್ರಾಸ್‌ನಲ್ಲಿ ಮಲಪ್ರಭಾ ಎಡದಂಡೆ ಕಾಲುವೆಯ ಸೈಪನ್ ಒಡೆದು ಎರಡು ವರ್ಷ ಕಳೆದರು ದುರಸ್ತಿ ಮಾಡದ ಹಿನ್ನಲೆಯಲ್ಲಿ ಸೋಮವಾರ ರಾಜ್ಯ ಹೆದ್ದಾರಿಯನ್ನು ಬಂದ್‌ ಮಾಡಿ ಬಿಜೆಪಿ ಮುಖಂಡ ವಿರೂಪಾಕ್ಷಿ ಮಾಮನಿ ನೇತೃತ್ವದಲ್ಲಿ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ರಸ್ತೆ ಬಂದ್‌ ಆಗಿದ್ದರಿಂದ ಕೆಲಕಾಲ ಪ್ರಯಾಣಿಕರು ಪರದಾಡಬೇಕಾಯಿತು.
ಹೋರಾಟಗಾರರಿಗೆ ಸ್ಪೂರ್ತಿ ತುಂಬಿದ್ದ ಪತ್ರಿಕೆಗಳು
ಕನ್ನಡಪ್ರಭ ವಾರ್ತೆ ಐಗಳಿ: ಸ್ವತಂತ್ರ ಚಳುವಳಿಯಲ್ಲಿ ಹೋರಾಟಗಾರರಿಗೆ ಸ್ಪೂರ್ತಿ ತುಂಬಿದ್ದ ಪತ್ರಿಕೆಗಳು ಇಂದು ಸಮಾಜದ ಅಂಕುಡೊಂಕು ತಿದ್ದುವಲ್ಲಿ ಯಶಸ್ವಿಯಾಗಿವೆ ಎಂದು ಮಾಜಿ ಶಾಸಕ ಶಹಜಾನ ಡೊಂಗರಗಾಂವ ಅನಿಸಿಕೆ ವ್ಯಕ್ತಪಡಿಸಿದರು.ತೆಲಸಂಗ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಥಣಿ ತಾಲೂಕು ಕಾರ್ಯನಿರತ ಗ್ರಾಮೀಣ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜರುಗಿದ ಪತ್ರಿಕಾ ದಿನಾಚರಣೆ ಕಾರ್ಯಕ್ರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು
ಮಹಾ ಮಳೆಗೆ ನಾಲ್ಕು ಸೇತುವೆ ಜಲಾವೃತ
ಕನ್ನಡಪ್ರಭ ವಾರ್ತೆ ಬೆಳಗಾವಿನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿರುವುದರಿಂದ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಜಲಾವೃತಗೊಂಡ ಸೇತುವೆಗಳ ಸಂಖ್ಯೆ ನಾಲ್ಕಕ್ಕೇರಿದೆ. ದೂದಗಂಗಾ ನದಿಯ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ, ನಿಪ್ಪಾಣಿ ತಾಲೂಕಿನ ದೂದಗಂಗಾ ನದಿಯ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿರುವ ಮಾಂಜರಿ - ಭಾವನ ಸೌಂದತ್ತಿ ಸೇತುವೆ ಜಲಾವೃತಗೊಂಡಿವೆ. ಇವು ಕೆಳಹಂತದ ಸೇತುವೆಗಳಾಗಿದ್ದು, ಪರ್ಯಾಯ ಮಾರ್ಗಗಳ ಮೂಲಕ ಜನಸಂಚಾರ ವ್ಯವಸ್ಥೆ ಜಾರಿಯಲ್ಲಿದೆ.
  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 468
  • next >
Top Stories
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved