• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಂಚಬಾಕ ಅಧಿಕಾರಿಗಳು ನಮಗೆ ಬೇಕಿಲ್ಲ
ಕೆಲವು ದಿನಗಳಿಂದ ಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗುತ್ತಿದ್ದು, ಅವುಗಳಿಗೆ ಅಧಿಕಾರಿಗಳು ವೇಗ ನೀಡಬೇಕು. ಅಲ್ಲದೇ, ಸಾರ್ವಜನಿಕರಿಂದ ಹಣ ಪಡೆದು ಅಧಿಕಾರಿಗಳು ಕೆಲಸ ಮಾಡಿಕೊಡುತ್ತಿರುವ ದೂರುಗಳು ಬಂದಿವೆ. ಅಂತವರ ವಿರುದ್ಧ ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು.
ದಂಡು ಮಂಡಳಿ ಸಭೆ ಜು.13ಕ್ಕೆ ಮುಂದೂಡಿಕೆ
ಕನ್ನಡಪ್ರಭ ವಾರ್ತೆ ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ವಸತಿ ಪ್ರದೇಶಗಳನ್ನು ಹಾಗೂ ಮಾರುಕಟ್ಟೆ ಪ್ರದೇಶಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಸಂಬಂಧ ನಡೆದ ಸಭೆ ಜುಲೈ 13ಕ್ಕೆ ಮುಂದೂಡಲಾಗಿದೆ. ನಗರದ ದಂಡು ಮಂಡಳಿಯ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಪಾಲಿಕೆ ವ್ಯಾಪ್ತಿಗೆ ಹಸ್ತಾಂತರಿಸಲು ನಿರ್ಧರಿಸುವ 112 ಎಕರೆ 32 ಗುಂಟೆ ದಂಡು ಮಂಡಳಿಯ ಜಾಗವನ್ನು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವ ಸಂಬಂಧ ಈ ಸಭೆಯನ್ನು ಆಯೋಜಿಸಲಾಗಿತ್ತು.
ಸಮಾಜ ಪರಿವರ್ತಿಸುವ ಶಕ್ತಿ ಸಾಹಿತ್ಯಕ್ಕಿದೆ: ಡಾ.ಗುರುದೇವಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಸಮಾಜವನ್ನು ಪರಿವರ್ತಿಸುವ ಶಕ್ತಿ ಸಾಹಿತ್ಯಕ್ಕೆ ಇದೆ. ಸಮಾಜದ ಬಗ್ಗೆ ಚಿಂತನೆ, ಗೌರವ ಇಟ್ಟಕೊಂಡು ಮನ ಮುಟ್ಟುವ ಕವನಗಳನ್ನು ನೀಡಿರುವ ಸುನೀತಾ ಅವರ ಕೃತಿಯಲ್ಲಿ ವಿಶೇಷತೆ ಅಡಗಿದೆ ಎಂದು ಹಿರಿಯ ಸಾಹಿತಿ ಡಾ.ಗುರುದೇವಿ ಹುಲೆಪ್ಪನವರಮಠ ಹೇಳಿದರು.
ಹನಮಂತ ದೇವರ ದೇವಸ್ಥಾನದ ಜಾತ್ರಾ ಮಹೋತ್ಸವ ಸಂಪನ್ನ
ಕನ್ನಡಪ್ರಭ ವಾರ್ತೆ ಬೈಲಹೊಂಗಲ ಪಟ್ಟಣದ ಹಳೆಯ ಹನಮಂತ ದೇವರ ದೇವಸ್ಥಾನದ ಜಾತ್ರಾ ಮಹೋತ್ಸವವು ಐದು ದಿನಗಳ ಕಾಲ ಅದ್ಧೂರಿಯಾಗಿ ನಡೆದು ಸಂಪನ್ನಗೊಂಡಿತು. ಐದು ದಿನಗಳ ಕಾಲ ನೆರವೇರಿದ ಜಾತ್ರಾ ಮಹೋತ್ಸವದಲ್ಲಿ ಪ್ರತಿದಿನ ಹನಮಂತ ದೇವರ ಪ್ರತಿಮೆಗೆ ಅಭಿಷೇಕ, ಕುಂಕುಮಾರ್ಚಣೆ, ಅಲಂಕಾರ, ಬುತ್ತಿ ಪೂಜೆ, ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು.
ಪತ್ರಕರ್ತರು ಆಧುನಿಕ ಸಮಾಜದ ಕೈಗನ್ನಡಿ
ಕನ್ನಡಪ್ರಭ ವಾರ್ತೆ ಬೆಳಗಾವಿ ತಂತ್ರಜ್ಞಾನ ಬೆಳವಣಿಗೆಯಿಂದ ಸುದ್ದಿಗಳ ಹರಿವು ಹೆಚ್ಚಾಗಿವೆ. ಪತ್ರಕರ್ತರು ಸುದ್ದಿಯ ವಾಸ್ತವ ಅಂಶವನ್ನು ಗುರುತಿಸಿ ಪ್ರಕಟಿಸುವ ಮೂಲಕ ಸಾಮಾಜಿಕ ಕಳಕಳಿ ಹೊಂದಬೇಕು. ಪತ್ರಕರ್ತರು ಸಮಾಜದ ಕನ್ನಡಿಯಿದ್ದಂತೆ, ಜನತೆಗೆ ವರದಿ ನೀಡುವ ಮೂಲಕ ಅವರಲ್ಲಿ ಜನಾಭಿಪ್ರಾಯ ಮೂಡಿಸಬಹುದು. ಹಾಗಾಗಿ ಪತ್ರಿಕೋದ್ಯಮವನ್ನು ಸಮಾಜದ ನಾಲ್ಕನೇ ಅಂಗ ಎಂದು ಕರೆಯಲಾಗುತ್ತದೆ ಎಂದು ಶಾಸಕ ರಾಜು(ಆಸಿಫ್) ಸೇಠ ತಿಳಿಸಿದರು.
ಅಂಗನವಾಡಿಗಳಲ್ಲಿ ಎಲ್‌ಕೆಜಿ,ಯುಕೆಜಿ ಆರಂಭಕ್ಕೆ ಸಂಭ್ರಮ
ಕನ್ನಡಪ್ರಭ ವಾರ್ತೆ ರಾಮದುರ್ಗ: ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ನಡೆಸುವ ನಿರ್ಧಾರ ತೆಗೆದುಕೊಂಡಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಅಭಿನಂದಿಸಿರುವ ಅಂಗನವಾಡಿ ನೌಕರರು, ರಾಮದುರ್ಗದಲ್ಲಿ ಸಿಹಿ ಹಂಚುವುದರ ಮೂಲಕ ವಿಜಯೋತ್ಸವ ಆಚರಿಸಿದರು. ಅಲ್ಲದೇ, ಸರ್ಕಾರದ ನಡೆಯನ್ನು ಸ್ವಾಗತಿಸಿ ಸಂಭ್ರಮಿಸಿದರು.
ಹೆಚ್ಚಾದ ಡೆಂಘೀ ಜ್ವರ : ಜಿಲ್ಲೆ ಜನತೆ ತತ್ತರ
ಮುಂಗಾರು ಮಳೆ ಆರಂಭಗೊಂಡ ಬಳಿಕ ಗಡಿ ಜಿಲ್ಲೆ ಬೆಳಗಾವಿ ಜಿಲ್ಲೆಯಲ್ಲಿ ಡೆಂಘೀ ಜ್ವರ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದ್ದು, ತೀವ್ರ ಆತಂಕ ಮೂಡಿಸಿದೆ. ಮೋಡ ಕವಿದ ವಾತಾವರಣ, ಜಿಟಿ ಜಿಟಿ ಮಳೆ ಹಾಗೂ ಬಿಸಿಲಿನ ವಾತಾವರಣ ಇರುವುದರಿಂದ ಸೊಳ್ಳೆಯ ಉತ್ಪತ್ತಿಗೆ ಅನುಕೂಲವಾಗಿದೆ. ಹಾಗಾಗಿ, ಡೆಂಘೀ ಜ್ವರ ಪ್ರಕರಣ ದಾಂಗುಡಿ ಇಟ್ಟಿದೆ. ಜೂನ್‌ ಒಂದೇ ತಿಂಗಳಲ್ಲೇ 68 ಡೆಂಘೀ ಪ್ರಕರಣಗಳು ದೃಢಪಟ್ಟಿವೆ.
ಸರ್ಕಾರಿ ನೌಕರರ ಸಂಘದ ಸದಸ್ಯರ ಕರಡು ಮತದಾರರ ಪಟ್ಟಿ ಪ್ರಕಟ
ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ 2024 ರಿಂದ 2029ನೇ ಸಾಲಿನ ಅವಧಿಗೆ ಎಲ್ಲ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸಂಘದ ಬೈಲಾ ನಿಯಮ 47ರ ರೀತ್ಯಾ ಕರಡು ಮತದಾರರ ಪಟ್ಟಿಯನ್ನು ಎಲ್ಲ ಇಲಾಖೆಗಳಿಂದ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ವಿವರದಂತೆ ಜು.1ರಂದು ಚಿಕ್ಕೋಡಿಯ ಬಸವ ಸರ್ಕಲ್ ಬಳಿ ಇರುವ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳ ಕಚೇರಿಯ ಸಭಾಗೃಹದಲ್ಲಿರುವ ಜಿಲ್ಲಾ ಶಾಖೆಯ ಸೂಚನಾ ಫಲಕದಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಸಮಾಜ ಸೇವೆಗೆ ಸೈನಿಕರ ಬದುಕು ಮುಡಪಾಗಿರಬೇಕು
ತಾಯ್ನಾಡಿನ ರಕ್ಷಣೆಗಾಗಿ ಸೈನ್ಯ ಸೇರಿ ಸೇವಾ ನಿವೃತ್ತಿಯವರೆಗೆ ಸುದೀರ್ಘವಾಗಿ ವೈರಿಗಳ ಜೊತೆ ಸದಾ ಹೋರಾಟ ನಡೆಸಿ, ಸುರಕ್ಷಿತವಾಗಿ ಮನೆಗೆ ಬಂದ ನಂತರ ತಮ್ಮ ಕುಟುಂಬದ ಜೊತೆ ಸುಖಜೀವನ ನಡೆಸುವುದರೊಂದಿಗೆ ಸಮಾಜ ಸೇವೆಗೆ ಸೈನಿಕರ ಬದುಕು ಮುಡಪಾಗಿರಬೇಕು ಎಂದು ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಗಂಗಾಧರ ಸ್ವಾಮೀಜಿ ನುಡಿದರು.
ಕ್ಯಾನ್ಸರ್‌ ರೋಗ ಪತ್ತೆಗೆ ಎಐ ಸಹಕಾರಿ
ವೈದ್ಯವಿಜ್ಞಾನವು ಸಾಕಷ್ಟು ಬದಲಾವಣೆಗೊಳ್ಪಡುತ್ತಿದ್ದು, ಮುಂಬರುವ ವರ್ಷಗಳಲ್ಲಿ ಕೃತಕ ಬುದ್ದಿಮತ್ತೆಯು ಆರೋಗ್ಯ ಕ್ಷೇತ್ರದಲ್ಲಿ ಗಣನೀಯವಾಗಿ ಪ್ರಾಮುಖ್ಯತೆ ಪಡೆಯಲಿದೆ. ಅದರಲ್ಲಿಯೂ ಮುಖ್ಯವಾಗಿ ಕ್ಯಾನ್ಸರ್‌ನ ನಿಖರವಾದ ರೋಗಪತ್ತೆಗೆ ಸಹಕಾರಿಯಾಗಲಿದೆ. ಆದರೆ, ಚಿಕಿತ್ಸೆಯಲ್ಲಿ ಕುರುಡು ನಂಬಿಕೆ ಮತ್ತು ಅವಲಂಬನೆ ಇರಬಾರದು ಎಂದು ಪದ್ಮಶ್ರೀ ಪುರಸ್ಕೃತ, ಹಿರಿಯ ಕ್ಯಾನ್ಸರ್‌ ತಜ್ಞವೈದ್ಯ ದೆಹಲಿ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟನ ಸಂಸ್ಥಾಪಕ ನಿರ್ದೇಶಕ ಡಾ.ರಾಜೇಶ ಕೆ.ಗ್ರೋವರ ಹೇಳಿದರು.
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 468
  • next >
Top Stories
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved