ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳೆಸುವುದು ನಮ್ಮ ಕರ್ತವ್ಯಮಕ್ಕಳನ್ನು ಸುರಕ್ಷಿತವಾಗಿ ಮತ್ತು ಸಂಸ್ಕಾರಯುತವಾಗಿ ಬೆಳೆಸುವುದು ನಮ್ಮ ನಿಮ್ಮೆಲರ ಆದ್ಯ ಕರ್ತವ್ಯವಾಗಿದೆ. ನಮ್ಮಲ್ಲಿ ಬರುವಂತಹ ಮಕ್ಕಳು ವಿಶೇಷದಲ್ಲಿ ವಿಶೇಷವಾಗಿರುತ್ತಾರೆ. ಅವರನ್ನು ತಿದ್ದಿ ಒಳ್ಳೆಯ ನಾಗರಿಕರನ್ನಾಗಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ನಿಮ್ಮೆಲ್ಲರ ಪಾತ್ರ ಪ್ರಮುಖವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಬಾಲನ್ಯಾಯ ಮಂಡಳಿಯ ಪ್ರಧಾನ ದಂಡಾಧಿಕಾರಿ ಶ್ರೀಕಂಠ ಎನ್. ಎ ಹೇಳಿದರು.