ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲ ರಂಗದಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿದ್ಧ ಬಿಜೆಪಿ-ಜೆಡಿಎಸ್ ಮೈತ್ರಿಪಕ್ಷಗಳು ಒಗ್ಗಟ್ಟಿನಿಂದ ಹೋರಾಡಲು ತೀರ್ಮಾನಿಸಿವೆ.
ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಿರುವ ಪೂರ್ವ ಪ್ರಾಥಮಿಕ ತರಗತಿಗಳ (ಎಲ್ಕೆಜಿ-ಯುಕೆಜಿ) ಮಕ್ಕಳಿಗೂ ಡಿ.1ರಿಂದ ಬೆಳಗ್ಗೆ ಹಾಲು, ಮಧ್ಯಾಹ್ನ ಬಿಸಿಯೂಟ ಮತ್ತು ಮೊಟ್ಟೆ, ಬಾಳೆಹಣ್ಣು ವಿತರಿಸಲು ಅನುಮತಿ ನೀಡಿ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಜನ್ಮದಿನ. ತಾನು ಜನ್ಮದಿನ ಆಚರಣೆ ಮಾಡಿಕೊಳ್ಳೋದಿಲ್ಲ ಎಂದು ಹೇಳಿದ್ದಾರೆ. , ‘ಬರ್ತ್ಡೇ ಬಗ್ಗೆ ಸಂಭ್ರಮಿಸೋದಕ್ಕೆ ನನಗೇನು ಹದಿನೆಂಟು ಹತ್ತೊಂಬತ್ತು ವರ್ಷ ಅಲ್ಲ. ಯಾಕಪ್ಪ ಬರ್ತ್ಡೇ ಬರುತ್ತೆ ಅಂತ ಕೇಳೋ ಸನ್ನಿವೇಶದಲ್ಲಿದ್ದೇನೆ’ ಎಂದಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ನಗರ ಪಾಲಿಕೆಯ ಹಿರಿಯ ಅಧಿಕಾರಿಗಳ ಚಲನವಲನ ಪತ್ತೆ ಸುಲಭವಾಗಲಿದೆ ಎಂಬ ಕಾರಣಕ್ಕೆ ರಸ್ತೆ ಗುಂಡಿ ಸೇರಿದಂತೆ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಎಐ ಬಳಸಿ ಸ್ವಯಂ ಪ್ರೇರಿತ ದೂರು ದಾಖಲಿಸುವ ಕ್ಯಾಮೆರಾಗಳನ್ನು ಕಾರುಗಳಿಗೆ ಅಳವಡಿಕೆಯ ಯೋಜನೆ ನೆನಗುದಿಗೆ ಬಿದ್ದಿದೆ.
ಭಾರತವು ವಿಶ್ವದ ಶೇ.20ರಷ್ಟು ಜನಸಂಖ್ಯೆಯನ್ನು ಹೊಂದಿದ್ದು, ಶೇ.4 ರಷ್ಟು ಮಾತ್ರ ಶುದ್ಧ ನೀರನ್ನು ಹೊಂದಿದೆ. ಈ ಸಂಪನ್ಮೂಲವನ್ನು ಕಾಪಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಅಂಗಾಂಗ ದಾನಕ್ಕೆ ದೇಶದಲ್ಲೇ ಅತಿ ಹೆಚ್ಚು ಮಂದಿ ಆನ್ಲೈನ್ ಮೂಲಕ ಹೆಸರು ನೋಂದಣಿ ಮಾಡಿಸಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದಿದ್ದು, ರಾಜ್ಯದಲ್ಲಿ 52,304 ಮಂದಿ ಅಂಗಾಂಗ ದಾನಕ್ಕೆ ಮುಂದೆ ಬಂದಿದ್ದಾರೆ. ಮೊದಲ 2 ಸ್ಥಾನಗಳಲ್ಲಿ ಮಹಾರಾಷ್ಟ್ರ ಹಾಗೂ ರಾಜಸ್ಥಾನ ಇವೆ.
ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ ಬಡ್ತಿ ನೀಡಲು ಇದೇ ಮೊದಲ ಬಾರಿಗೆ ಅರ್ಹತಾ ಪರೀಕ್ಷೆ ನಡೆಸಲು ನಿರ್ಧರಿಸಿದ್ದ ಶಾಲಾ ಶಿಕ್ಷಣ ಇಲಾಖೆಯು, ಇದೀಗ ಈ ಪರೀಕ್ಷೆಯನ್ನು 100 ಅಂಕಗಳಿಗೆ ನಿಗದಿಪಡಿಸಿದೆ. ಉತ್ತೀರ್ಣರಾಗಲು 50 ಅಂಕ ಪಡೆಯುವುದು ಕಡ್ಡಾಯ
ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಡಿಸ್ಟಿಲರಿಗಳು ಖರೀದಿಸಬೇಕಾಗಿರುವ ಮೆಕ್ಕೆ ಜೋಳವನ್ನು ನೇರವಾಗಿ ರೈತರಿಂದಲೇ ಖರೀದಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಹಿಳೆಯರು ನೂರಕ್ಕೆ ನೂರರಷ್ಟು ಸಾಕ್ಷರರಾಗಿಲ್ಲ. ಶೇ.100 ಸಾಕ್ಷರತೆ ಸಾಧಿಸುವುದರ ಜೊತೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನ ಹೆಚ್ಚಿಸಿಕೊಂಡು ಆರ್ಥಿಕ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದಾಬಸ್ಪೇಟೆ: ಸಾಲುಮರದ ತಿಮ್ಮಕ್ಕ ದಂಪತಿ ರಸ್ತೆ ಬದಿ ಗಿಡನೆಟ್ಟು ಮಕ್ಕಳಂತೆ ಪೋಷಣೆ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧಕ ಮಹಿಳೆಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು.
bengaluru