ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ 134 ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ 2025-26ನೇ ಸಾಲಿನಲ್ಲಿ ಲಭ್ಯವಿರುವ 11,330 ಸೀಟುಗಳಿಗೆ 41 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಮಾನ್ಯತೆ/ನವೀಕರಣ ಇಲ್ಲದೆ ಅನೇಕ ವರ್ಷಗಳಿಂದ ಅಕ್ರಮವಾಗಿ ನಡೆಯುತ್ತಿರುವ ರಾಜ್ಯದ ಅನೇಕ ಖಾಸಗಿ ಶಾಲೆಗಳನ್ನು ಸಕ್ರಮಗೊಳಿಸಲು ಇದೀಗ ಅವಕಾಶ ಕಲ್ಪಿಸಿದೆ.
ಹಂಪಿ ಎಕ್ಸ್ಪ್ರೆಸ್ನಲ್ಲಿ ಬರುವಾಗ ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಪ್ರಯಾಣಿಕ ಮಹ್ಮದ್ ಭಾಷಾ ಅತ್ತಾರ ಮೇಲೆ ಟಿಟಿ ಹಲ್ಲೆ ಮಾಡಿರುವುದನ್ನು ಖಂಡಿಸಿ ಕೊಪ್ಪಳ ರೈಲ್ವೆ ನಿಲ್ದಾಣದ ಎದುರು ಕರವೇ ಕಾರ್ಯಕರ್ತರು ಶನಿವಾರ ಪ್ರತಿಭಟನೆ ಮಾಡಿದರು.
ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ಪ್ರದೇಶದಲ್ಲಿ ಆರೋಗ್ಯ ಸೇವೆಯ ಲಭ್ಯತೆ ಸುಧಾರಿಸಲು, ಪರಿಣಾಮಕಾರಿ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ₹873 ಕೋಟಿ ವೆಚ್ಚದಲ್ಲಿ 88 ವಿವಿಧ ಆಸ್ಪತ್ರೆಗಳ ನಿರ್ಮಾಣ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.
ರಾಜ್ಯಾದ್ಯಂತ ಬ್ರಾಹ್ಮಣ ಸಮುದಾಯದ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಜನಿವಾರ ಪ್ರಕರಣದ ಪ್ರಮುಖ ಸಂತ್ರಸ್ತರಾದ ಬೀದರ್ನ ವಿದ್ಯಾರ್ಥಿ ಸಚಿವ್ರತ ಕುಲಕರ್ಣಿ ಸಮಸ್ಯೆ ಇತ್ಯರ್ಥವಾದಂತಾಗಿದೆ.
ಹೈಕೋರ್ಟ್ ಆದೇಶದಂತೆ ಉಬರ್ ಇಂಡಿಯಾ ಸಿಸ್ಟಂ ಸೇರಿ ಇನ್ನಿತರ ಆ್ಯಪ್ ಆಧಾರಿತ ಸಂಸ್ಥೆಗಳಿಂದ ನೀಡಲಾಗುತ್ತಿರುವ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.