ಉತ್ತರ ಕನ್ನಡ ಜಿಲ್ಲೆ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಮತ್ತು ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ನಗರದ ಪಿಎಂಎಲ್ಎ ವಿಶೇಷ ಕೋರ್ಟ್ಗೆ ದೋಷಾರೋಪಪಟ್ಟಿ ಸಲ್ಲಿಸಿದೆ
ಪ್ರಹ್ಲಾದ್ ಜೋಷಿ ಸೇರಿ ಬಿಜೆಪಿ-ಜೆಡಿಎಸ್ ಸಂಸದರು ನೀರಾವರಿ, ಹಣಕಾಸು ವಿಚಾರಗಳೂ ಸೇರಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಯಾವ ಅನ್ಯಾಯಗಳ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಒಂದು ದಿನವೂ ಸಂಸತ್ನಲ್ಲಿ ರಾಜ್ಯದ ಪರವಾಗಿ ದನಿ ಎತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ
ಗುಜರಾತಿನ ಕಚ್ ಪ್ರಾಂತ್ಯದಿಂದ ತರಿಸಿರುವ 10 ಲಕ್ಷ ರು. ಮೌಲ್ಯದ ದಪ್ಪ ಕೊಂಬಿನ ವಿಶಿಷ್ಟ ‘ಕಾಂಕ್ರೇಜ್’ ತಳಿಯ ಹಸು ಕೃಷಿ ಮೇಳದಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಬೇಗೂರಿನ ಶ್ರೀ ಕೃಷ್ಣ ಗೋಶಾಲೆಯವರು ಹತ್ತಾರು ವಿಭಿನ್ನ ತಳಿಗಳನ್ನು ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿ ಕೊಟ್ಟಿದ್ದಾರೆ.
ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಶತಾಯುಷಿ, ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ (114) ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ತಿಮ್ಮಕ್ಕ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಕೊನೆಯುಸಿರೆಳೆದರು