ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಈ ತಿಂಗಳಾಂತ್ಯಕ್ಕೆ ಕೊನೆಗೊಳ್ಳಲಿರುವ ರಾಜ್ಯದ 180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲು 150 ದಿನ ಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ನಗರದಲ್ಲಿ ಸ್ಟಾರ್ಟ್ಅಪ್ ನಡೆಸುತ್ತಿರುವ ಅಮೆರಿಕ ಪ್ರಜೆ ಟೋನಿ ಕ್ಲೋರ್ ಎಂಬುವರು ಜಿಬಿಎ ಪೌರ ಕಾರ್ಮಿಕನಂತೆ ವಸ್ತ್ರ ಧರಿಸಿ ಕೈಯಲ್ಲಿ ಪೊರಕೆ ಹಿಡಿದು ರಸ್ತೆಯನ್ನು ಗುಡಿಸುವ ಮೂಲಕ ನಗರದ ರಸ್ತೆ, ಫುಟ್ಪಾತ್ ಮತ್ತು ಕಸದ ಅದ್ವಾನ, ಅವಾಂತರದ ಕುರಿತು ಬೆಳಕು ಚೆಲ್ಲಿದ್ದಾನೆ.
ರಾಜ್ಯದಲ್ಲಿ ಸರ್ಕಾರಿ ಭ್ರಷ್ಟ ವ್ಯವಸ್ಥೆ ಮೇಲಿನ ಕಣ್ಗಾವಲು ಬಿಗಿಗೊಳಿಸಿರುವ ಲೋಕಾಯುಕ್ತ ಪೊಲೀಸ್ ಘಟಕ, ಇದೀಗ ಪ್ರತಿ ಇಲಾಖೆಯಲ್ಲಿ ನುಂಗಣ್ಣರ ಪತ್ತೆಗೆ ಎಸ್ಪಿಗಳ ಉಸ್ತುವಾರಿಯಲ್ಲಿ ಡಿವೈಎಸ್ಪಿ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿದೆ.
ಮನೆ ಕೆಲಸಾದಳು ಕಣ್ಣೂರು ರಸ್ತೆಯ ಶೋಭಾ ಡ್ರೀಮ್ ಅಪಾರ್ಟ್ಮೆಂಟ್ನ ಲಿಫ್ಟ್ನಲ್ಲಿ ಸಾಕು ನಾಯಿಯನ್ನು ಮನಬಂದಂತೆ ಬಟ್ಟೆ ಸೆಳೆದಂತೆ ಎತ್ತಿ ಬಿಸಾಡಿ ಕ್ರೂರವಾಗಿ ಹತ್ಯೆಗೈದಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮುಂದಿನ ದಿನಗಳಲ್ಲಿ ವಿಳಂಬ ಮಾಡದೆ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಆಯಾ ವರ್ಷವೇ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಸೋಮವಾರ ನಡೆದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದರು.
ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆ (ಡಯಟ್) ಉಪನ್ಯಾಸಕರ ನಿಯೋಜನೆ ಕೈಬಿಡಬೇಕು ಮೌಲ್ಯಮಾಪನಕ್ಕೆ ಸಂಬಂಧಿಸಿದ ಬಾಕಿ ಮೊತ್ತ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಿಯು ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ತೀರ್ಮಾನಿಸಿದ್ದಾರೆ.
ಸುರಂಗ ರಸ್ತೆ ವಿರೋಧಿಸಿ ನಾಗರಿಕ ಸಂಘಟನೆಗಳ ಕಾರ್ಯಕರ್ತರನ್ನು ಒಳಗೊಂಡ ‘ಲಾಲ್ ಬಾಗ್ ಉಳಿಸಿ ಹೋರಾಟ ಸಮಿತಿ’ಯಿಂದ ಭಾನುವಾರ ಲಾಲ್ ಬಾಗ್ನಲ್ಲಿ ‘ಬೆಂಗಳೂರು ರಕ್ಷಿಸಿ, ಟನಲ್ ರೋಡಿ ನಿಲ್ಲಿಸಿ’ ಎಂಬ ಘೋಷವಾಕ್ಯದೊಂದಿಗೆ ಸಹಿ ಸಂಗ್ರಹ ಅಭಿಯಾನ, ಪ್ರತಿಭಟನೆ ನಡೆಸಲಾಯಿತು.