ಬೆಂಗಳೂರು : ಸೋಮವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವುದು ಶೇ.99ರಷ್ಟು ಖಚಿತ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸಂಪುಟ ವಿಸ್ತರಣೆ

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಬಳಿಕ ಸುದ್ದಿಗಾರರು ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ, ಅವರು ಈ ಉತ್ತರ ನೀಡಿದರು.

ಸೋಮವಾರ ಸಂಪುಟ ವಿಸ್ತರಣೆ ಕಾರ್ಯಕ್ರಮ

ಸೋಮವಾರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆಯೇ ಎಂಬ ಮಾಧ್ಯಮಗಳ ನೇರ ಪ್ರಶ್ನೆಗೆ ಉತ್ತರಿಸಿದ ಅವರು, ಸೋಮವಾರ ಸಂಪುಟ ವಿಸ್ತರಣೆ ಕಾರ್ಯಕ್ರಮ ನಡೆಯುವುದು ಶೇ. 99 ರಷ್ಟು ಖಚಿತವಾಗಿದೆ. ಹಾಗಾಗಿ ಲೋಕಭವನದ ಅಧಿಕಾರಿಗಳಿಗೂ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.