ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿ, ಭಾಲ್ಕಿ ಮೂಲದ ಬಸವರಾಜ್ ಕನ್ನಾಳೆಯನ್ನು ಸಿಐಡಿ ಅಧಿಕಾರಿಗಳು ದೆಹಲಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಈತ ರಾಷ್ಟ್ರೀಯ ಪಕ್ಷವೊಂದರ ಮುಖಂಡ ಎಂದು ತಿಳಿದು ಬಂದಿದೆ.

ಬೆಂಗಳೂರು : ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿ, ಭಾಲ್ಕಿ ಮೂಲದ ಬಸವರಾಜ್ ಕನ್ನಾಳೆಯನ್ನು ಸಿಐಡಿ ಅಧಿಕಾರಿಗಳು ದೆಹಲಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಈತ ರಾಷ್ಟ್ರೀಯ ಪಕ್ಷವೊಂದರ ಮುಖಂಡ ಎಂದು ತಿಳಿದು ಬಂದಿದೆ.

ಸಿಐಡಿ ಅಧಿಕಾರಿಗಳು ಭಾನುವಾರ ಕಾರ್ಯಾಚರಣೆ

ಸಿಐಡಿ ಅಧಿಕಾರಿಗಳು ಭಾನುವಾರ ಕಾರ್ಯಾಚರಣೆ ನಡೆಸಿ ಕನ್ನಾಳೆಯನ್ನು ವಶಕ್ಕೆ ಪಡೆದಿದ್ದು, ಸೋಮವಾರ ನಗರಕ್ಕೆ ಕರೆತಂದು ವಿಚಾರಣೆ ನಡೆಸಿ ಬಂಧಿಸುವ ಸಾಧ್ಯತೆ ಇದೆ. ಈತ ಪಶುವೈದ್ಯಾಧಿಕಾರಿಗಳ ನೇಮಕಾತಿ ವೇಳೆ ಆಯ್ಕೆ ಆಗಿರುವ ಅಭ್ಯರ್ಥಿಗಳ ಜತೆ ಸಂಪರ್ಕದಲ್ಲಿದ್ದ.

ವಿಚಾರಣೆ ನಡೆಸಿದ ವೇಳೆ ಬಸವರಾಜ್ ಕನ್ನಾಳೆ ಹೆಸರು ಬಾಯ್ಬಿಟ್ಟಿದ್ದರು.

ಆಯ್ಕೆ ಆದ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ ವೇಳೆ ಬಸವರಾಜ್ ಕನ್ನಾಳೆ ಹೆಸರು ಬಾಯ್ಬಿಟ್ಟಿದ್ದರು. ಅಭ್ಯರ್ಥಿಗಳ ಹೇಳಿಕೆ ಆಧರಿಸಿ ಬಸವರಾಜ್ ಕನ್ನಾಳೆಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತನ ವಿಚಾರಣೆಯಿಂದ ಇನ್ನಷ್ಟು ಮಹತ್ವದ ಮಾಹಿತಿ ಹೊರಬೀಳುವ ನಿರೀಕ್ಷೆ ಇದೆ.