ಸರ್ಕಾರಿ ಉದ್ಯೋಗದಲ್ಲಿ ಕೆಲಸ ಮಾಡುವ ಮಹಿಳೆಯರು ಸೇರಿ ಇಡೀ ದೇಶದಲ್ಲಿ ಮೊದಲ ಬಾರಿಗೆ ಐಟಿ-ಬಿಟಿ, ಖಾಸಗಿ ಕಂಪನಿ, ಕೈಗಾರಿಕೆ, ಗಾರ್ಮೆಂಟ್ಸ್ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ತಿಂಗಳಿಗೆ ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನ ಸಹಿತ ಋತುಚಕ್ರ ರಜೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಪ್ರತಿ ಸದಸ್ಯರಿಗೆ ನೀಡುತ್ತಿದ್ದ ತಲಾ 10 ಕೆ.ಜಿ. ಅಕ್ಕಿ ಬದಲು ತಲಾ 5 ಕೆ.ಜಿ. ಅಕ್ಕಿ ಹಾಗೂ ತೊಗರಿ ಬೇಳೆ, ಹೆಸರು ಕಾಳು, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲು ನಿರ್ಧಾರ
ಮಹರ್ಷಿ ವಾಲ್ಮೀಕಿ ಶೋಷಿತ ಸಮುದಾಯದಲ್ಲಿ ಹುಟ್ಟಿ ಬದುಕನ್ನು ಬದಲಿಸುವಂತಹ ಮಹಾಕಾವ್ಯವನ್ನು ರೂಪಿಸಿದರು. ಅವರ ಮೌಲ್ಯಗಳು, ಅವರ ರಚನೆಗಳನ್ನು ಜನರಿಗೆ ತಿಳಿಸಲು ಎಸ್ಸಿಎಸ್ಪಿ/ಟಿಎಸ್ಪಿ ಅನುದಾನದ ಮೂಲಕ ದೆಹಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ಕೇಂದ್ರ ಸ್ಥಾಪನೆ ಮಾಡಲಾಗುವುದು.
ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಪೂರ್ವ ಮಧ್ಯ ರೈಲ್ವೆಯು ದಾನಾಪುರ–ಯಶವಂತಪುರ ನಡುವೆ ವೀಕ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡುತ್ತಿದೆ.
ಹೆಬ್ಬಾಳ - ಸರ್ಜಾಪುರ ಸಂಪರ್ಕಿಸುವ ನಮ್ಮ ಮೆಟ್ರೋದ 3ಎ ಹಂತಕ್ಕೆ (ಕೆಂಪು ಮಾರ್ಗ) ಜಿಯೋ ಟೆಕ್ನಿಕಲ್ ಇನ್ವೆಸ್ಟಿಗೇಷನ್ ನಡೆಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಮುಂದಾಗಿದೆ.
ರಾಜ್ಯಾದ್ಯಂತ ಸೆ.22ರಿಂದ ಶುರುವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅ.7ಕ್ಕೇ ಮುಗಿಯಬೇಕಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ. ಹೀಗಾಗಿ ಸಮೀಕ್ಷೆಗೆ 10 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ದಸರಾ ರಜೆ ವಿಸ್ತರಣೆ