ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸಂಯುಕ್ತ ಖಾಜಿಗಳು, ಧರ್ಮಗುರುಗಳ ನೇತೃತ್ವದಲ್ಲಿ ಕರಾವಳಿಯ ಮುಸ್ಲಿಂ ಸಮುದಾಯ ಶುಕ್ರವಾರ ಇಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಸಿಇಟಿ ಪರೀಕ್ಷೆ ವೇಳೆ ಬೀದರ್ನ ಸಾಯಿಸ್ಫೂರ್ತಿ ಕಾಲೇಜಿನಲ್ಲಿ ಹಾಗೂ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಗುಡುಗು ಸಹಿತ ಮಳೆ ಹಾಗೂ ಚದುರಿದಂತೆ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬಿಬಿಎಂಪಿಯಲ್ಲಿ ಗುತ್ತಿಗೆ ಮತ್ತು ನೇರ ವೇತನದಲ್ಲಿ ಕೆಲಸ ಮಾಡುತ್ತಿರುವ 12,692 ಪೌರ ಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಲಾಗುತ್ತಿದೆ.
ರೀಲ್ಸ್ ಮಾಡಲು ನಡು ರಸ್ತೆಯಲ್ಲಿ ಚಹಾ ಕುಡಿಯುತ್ತ ಕುಳಿತು ಹೀರೋಯಿಸಂ ತೋರಿಸಿದ್ದ ಟೆಂಪೋ ಚಾಲಕನೊಬ್ಬನನ್ನು ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಸೇಂಟ್ ಫಾನ್ಸೀಸ್ ಕ್ಸೇವೀಯರ್ ಕ್ಯಾಥೆಡ್ರಲ್ ಚರ್ಚ್ನಲ್ಲಿ ಗುರುವಾರ ಸಂಜೆ ಬೆಂಗಳೂರು ಧರ್ಮಪ್ರಾಂತ್ಯದ ಆರ್ಚ್ ಬಿಷಪ್ ಡಾ। ಪೀಟರ್ ಮಚಾದೋ ಅವರು ಪಾದ ತೊಳೆಯುವ ಸೇವೆ ಮಾಡಿದರು.
ಬನ್ನೇರುಘಟ್ಟ ಸಫಾರಿಯಲ್ಲಿರುವ ಸಾಕಾನೆಯೊಂದು ನಡುರಸ್ತೆಯಲ್ಲಿ ನಿಂತು ಸುಮಾರು ಒಂದು ಗಂಟೆಗೂ ಅಧಿಕ ಸಮಯ ಬಸ್ ಅಡ್ಡಗಟ್ಟಿ ಪ್ರಯಾಣಿಕರಿಗೆ ಆತಂಕದ ವಾತಾವರಣ ಸೃಷ್ಠಿಸಿದ ಘಟನೆ ನಡೆದಿದೆ.
ಒಂದನೇ ತರಗತಿ ಪ್ರವೇಶಕ್ಕೆ ಈ ವರ್ಷದ ಮಟ್ಟಿಗೆ ವಯೋಮಿತಿ ಸಡಿಲಿಸಿ 5.5 ವರ್ಷ ಪೂರ್ಣಗೊಂಡ ಮಕ್ಕಳನ್ನೂ ದಾಖಲಾತಿ ಮಾಡಿಕೊಳ್ಳಲು ಅವಕಾಶ ನೀಡಿರುವ ಶಿಕ್ಷಣ ಇಲಾಖೆ, ಪೂರ್ವ ಪ್ರಾಥಮಿಕ ಶಿಕ್ಷಣ ಪೂರೈಸಿರುವ ಮಕ್ಕಳಿಗೆ ಮಾತ್ರ ಇದು ಅನ್ವಯ ಎಂದು ಹೇಳಿರುವುದು ಮತ್ತೆ ಗೊಂದಲಕ್ಕೆ ಕಾರಣವಾಗಿದೆ.
ಸರಕು ಸಾಗಣೆ ಲಾರಿ ಮಾಲೀಕರು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಮುಷ್ಕರ ಗುರುವಾರ ಅಂತ್ಯವಾಗಿದೆ. ಲಾರಿ ಮಾಲೀಕರ ಬೇಡಿಕೆಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ಲಾರಿ ಮಾಲೀಕರು ಘೋಷಿಸಿದರು.
ಜಾತಿಗಣತಿ ವರದಿ ಬಗ್ಗೆ ತೀವ್ರ ಆಕ್ಷೇಪ ಗೊಂದಲ ಇರುವುದರಿಂದ ತರಾತುರಿ ನಿರ್ಧಾರ ಬೇಡ ಎಂಬ ಅಭಿಪ್ರಾಯಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವರದಿ ಕುರಿತು ಆಕ್ಷೇಪಣೆ ಹಾಗೂ ಅಭಿಪ್ರಾಯಗಳನ್ನು ಲಿಖಿತವಾಗಿ ಸಲ್ಲಿಸಲು ಸಚಿವರಿಗೆ ಸೂಚನೆ ನೀಡಿ ಸಂಪುಟ ಸಭೆಯನ್ನು ಮುಂದೂಡಿದ್ದಾರೆ.