ಹವ್ಯಕ ಸಮಾಜ ದೇಶದ ಬಗ್ಗೆ ಹಿತಚಿಂತನೆ ಮಾಡುತ್ತಿರುವ ಶಿಸ್ತುಬದ್ಧ, ಬುದ್ಧಿವಂತ ಹಾಗೂ ಜಾಗೃತ ಸಮಾಜ. ಕೇವಲ ಐದು ಲಕ್ಷ ಜನಸಂಖ್ಯೆ ಇರುವ ಅತ್ಯಂತ ಚಿಕ್ಕ ಸಮಾಜವಾಗಿದ್ದರೂ ದೇಶವೇ ಮೆಚ್ಚುವಂಥ ದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶ್ಲಾಘಿಸಿದರು.
ಕಲಬುರಗಿಯ ಕಂಟ್ರಾಕ್ಟರ್ ಸಚಿನ್ ಪಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದಲೂ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್.ರವಿ.ಕುಮಾರ್ ಆಗ್ರಹಿಸಿದ್ದಾರೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಈ ಬಗ್ಗೆ ಸಿಐಡಿ ತನಿಖೆ ಆಗಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಹೊಸವರ್ಷಾಚರಣೆ ವೇಳೆ ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.