ಸಾಹಸ ಸಿಂಹ ಡಾ। ವಿಷ್ಣುವರ್ಧನ್ ಅವರ 15ನೇ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಅವರ ಸಮಾಧಿಗೆ ಪೂಜೆ ಸಲ್ಲಿಸಲು ಬಂದ ಅಭಿಮಾನಿಗಳಿಗೆ ಸಮಾಧಿಗೆ ಪೂಜೆ ಮಾಡುವ ಅವಕಾಶ, ಸಮಾಧಿಗೆ ಅಲಂಕಾರ ಮಾಡುವ ಅವಕಾಶ ನಿರಾಕರಿಸಲಾಗಿದೆ.
ಹಿನ್ನೆಲೆಯಲ್ಲಿ ಕಾವೇರಿ ನದಿ ತೀರ ಸೇರಿದಂತೆ ವಿವಿಧ ಜಿಲ್ಲೆಯ ಕೆಲವು ಕಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಯಮ ಮೀರಿ ಮೋಜು, ಮಸ್ತಿಯಲ್ಲಿ ತೊಡಗಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಸಿದ್ಧರಿದ್ದರೆ ಅದನ್ನು ಸರ್ಕಾರ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.
ಕೆಎಎಸ್ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಗೆ ಸಂಬಂಧಿಸಿ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದ್ದ ಕಾರಣ ಕಡಿಮೆ ಅವಧಿಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಮುದ್ರಿಸಿ, ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ. ಹೀಗಾಗಿ, ಕೆಲ ಲೋಪಗಳು ಆಗಿವೆ ಎಂದು ಕೆಪಿಎಸ್ಸಿ ಮೂಲಗಳು ತಿಳಿಸಿವೆ.
ಆಂದೋಲಾ ಸ್ಚಾಮೀಜಿ, ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಮುಖಂಡರಾದ ಚಂದು ಪಾಟೀಲ್, ಮಣಿಕಂಠ ರಾಠೋಡ ಕೊಲೆಗೆ ಸಂಚು ರೂಪಿಸಿ ಮಹಾರಾಷ್ಟ್ರ ಮೂಲದ ಗುಂಡಾಗಳಿಗೆ ಸುಪಾರಿ ಕೊಟ್ಟಿದ್ದಾರೆ ಎಂದು ಎಂಎಲ್ಸಿ ರವಿಕುಮಾರ್ ಆರೋಪಿಸಿದ್ದಾರೆ.
ಸೂಕ್ತ ವಯಸ್ಸಿನಲ್ಲಿ ಶಾಸ್ತ್ರೀಯ ವಿವಾಹ ಜರುಗಿಸಲು ಪ್ರತಿ ಹವ್ಯಕರ ಮನೆಯಲ್ಲೂ ಸಂಕಲ್ಪ ಆಗಬೇಕು. ದಂಪತಿ ನಾಲ್ಕನೇ ಮಗು ಪಡೆದರೂ ಮಠ ಅದರ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧವಾಗಿದೆ’ ಎಂದು ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.
ನಾಗರಿಕರ ಸುರಕ್ಷತೆಗಾಗಿ ಯೋಧರ ಹರಿಸುವ ಬೆವರು ಹಾಗೂ ರಕ್ತದ ಕಾರಣದಿಂದಾಗಿ ದೇಶ ಸುಭದ್ರವಾಗಿದೆ. ದೇಶ ಕಾಯುವ ಯೋಧರ ಸೇವೆ ಅತ್ಯಂತ ಶ್ಲಾಘನೀಯ. ಅವರನ್ನು ನಾವು ಎಂದಿಗೂ ಸ್ಮರಿಸುತ್ತಿರಬೇಕು ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಹೇಳಿದ್ದಾರೆ.
ಶಿಕ್ಷಣ ಇಲಾಖೆಯ ಕೆಲ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಅರ್ಹತೆ ಇಲ್ಲದ ಶಾಲೆಗಳಿಗೂ 5 ವರ್ಷ, 10 ವರ್ಷಗಳ ಕಾಲ ಮಾನ್ಯತೆ ನವೀಕರಿಸಿ ಅಕ್ರಮ ಎಸಗಿರುವ ಆರೋಪಗಳು ಕೇಳಿಬಂದಿವೆ.
ಭಾರತದಲ್ಲಿನ ಸ್ಥಾಯಿಕ ಪುನರಂ ಅವರ ಲೋಕನ ಅಧಿಕಾರವು ಉಚ್ಚ ನ್ಯಾಯಾಲಯದೋಂದಿಗೆ ಸರ್ವೋಚ್ಚ ನ್ಯಾಯಾಲಯವು ಹೊಂದಿದೆ!’ ಇಂತಹ ಅನೇಕ ಎಡವಟ್ಟುಗಳು ಕೆಎಎಸ್ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ನುಸುಳಿ ಅಭ್ಯರ್ಥಿಗಳ ನೆಮ್ಮದಿ ಕೆಡಿಸಿವೆ.
ಬಿಜೆಪಿಯವರು ಹೇಳಿದ ಕೂಡಲೇ ನಾನ್ಯಾಕೆ ರಾಜೀನಾಮೆ ಕೊಡಬೇಕು? ಅವರ ಆರೋಪಗಳಿಗೆ ಸಾಕ್ಷಿ, ಪುರಾವೆ ಕೊಡಬೇಕಲ್ಲವೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಶ್ನಿಸಿದರು.