ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್ಡಿಪಿ ಪ್ರಗತಿ ಸಾಧಿಸಿದೆ. ಇದು ದೇಶದ ಸರಾಸರಿಗಿಂತ (ಶೇ.8.2) ಶೇ.2 ರಷ್ಟು ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಏಕಾಏಕಿ ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ ಸ್ಥಗಿತಗೊಳಿಸಲಾಗಿದೆ.
ರಾಜಧಾನಿ ಬೆಂಗಳೂರು, ಹಾವೇರಿ, ಕೊಪ್ಪಳ, ದಾವಣಗೆರೆ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸುತ್ತಿದೆ.
ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜ (80) ಭಾನುವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಶನಿವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ
ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಣ್ಯ ಸಚಿವರ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ 2023-24ನೇ ಸಾಲಿನಲ್ಲಿ ನಿರ್ಮಿಸಲಾದ ನೆಡುತೋಪಿನ ಸರ್ವೇ ನಡೆಸಲಾಗಿದ್ದು, ಅದರಲ್ಲಿ ಕೇವಲ ಶೇ. 2.5ರಷ್ಟು ಸಸಿಗಳು ಒಂದು ವರ್ಷದಲ್ಲಿ ನಾಶವಾಗಿರುವುದು ಕಂಡು ಬಂದಿದೆ.
ಖಾಸಗಿ ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆಯಲು ಕಲಿಕೆಯಲ್ಲಿ ಹಿಂದುಳಿದ ಶಾಲಾ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸುವ ಕುತಂತ್ರ ನಡೆಸಿದರೆ ಮಾನ್ಯತೆ ಜೊತೆಗೆ ಶಾಲಾ ಸಂಕೇತ ಸಹ ರದ್ದಾಗಲಿದೆ
ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಇ-ಖಾತಾ ಪಡೆಯಲು ರೂಪಿಸಿರುವ ಇ-ಆಸ್ತಿ ವೆಬ್ಸೈಟ್ನಲ್ಲಿ ಖಾತಾ ವರ್ಗಾವಣೆ ಆಯ್ಕೆ ನೀಡದ ಕಾರಣ ಖಾತಾ ವರ್ಗಾವಣೆ (ಖಾತಾ ಟ್ರಾನ್ಸ್ಫರ್) ಬಯಸುವ ಆಸ್ತಿ ಮಾಲೀಕರಲ್ಲಿ ಗೊಂದಲ ಉಂಟಾಗಿದೆ.
ನಗರದಲ್ಲಿ ದೀಪಾವಳಿ ಬಳಿಕ ಕಾಫಿ-ಚಹಾ ದರ ಗ್ರಾಹಕರ ಜೇಬಿಗೆ ಕತ್ತರಿ ಹಾಕುವುದು ನಿಚ್ಚಳವಾಗಿದೆ. ಭಾರತೀಯ ಕಾಫಿ ವ್ಯಾಪಾರಿ ಸಂಘ (ಐಸಿಟಿಎ) ಕೇಜಿ ಕಾಫಿಗೆ ₹100 ವರೆಗೆ ಹೆಚ್ಚಿಸುತ್ತಿರುವುದು ಹಾಗೂ ಟೀ ಪುಡಿಯ ದರ ಸಹ ಹೆಚ್ಚಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.