ಕೇಂದ್ರ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಹಣಕಾಸು ಪರಿಸ್ಥಿತಿ ಏನಿದೆ ಎಂಬ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ನಗರದ ಜನತೆಯನ್ನು ಬೆಂಬಿಡದೆ ಕಾಡುತ್ತಿರುವ ರಸ್ತೆ ಗುಂಡಿ ಸಮಸ್ಯೆಯು ತಕ್ಷಣಕ್ಕೆ ಬಗೆಹರಿಯುವ ಲಕ್ಷಣಗಳೇ ಕಾಣುತ್ತಿಲ್ಲ. ವಾಹನ ಸವಾರರು ಗುಂಡಿ ಮುಕ್ತ ರಸ್ತೆಗಳಲ್ಲಿ ಓಡಾಡಲು ವರ್ಷಾಂತ್ಯದವರೆಗೆ ಕಾಯಲೇಬೇಕಂತೆ!
29 ಕಾನೂನುಗಳನ್ನು 4 ಸಂಹಿತೆಯಾಗಿ ಮಾರ್ಪಾಡು ಮಾಡಿರುವುದನ್ನು ರಾಜ್ಯದಲ್ಲಿ ಜಾರಿಗೊಳಿಸಬಾರದು ಹಾಗೂ ಬೆಲೆ ಏರಿಕೆ ಆಧಾರದಲ್ಲಿ ತುಟ್ಟಿಭತ್ಯೆ ಜೊತೆಗೆ ಎಲ್ಲ ವಿಭಾಗದ ಅಕುಶಲ ಕಾರ್ಮಿಕರಿಗೆ ಸಮಾನ ಕನಿಷ್ಠ ವೇತನ ₹31,566 ಜಾರಿಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಗುರುವಾರ ಬೆಂಗಳೂರಿನಲ್ಲಿ ಯುವ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದರು.
ಬೆಂಗಳೂರು ಅರಮನೆ ಮೈದಾನದ ಭೂಮಿಯಲ್ಲಿ ಯಾವುದೇ ಕಾಮಗಾರಿ ನಡೆಸುವುದು ಅಥವಾ ಕೈ ಬಿಡುವ ಹಕ್ಕನ್ನು ರಾಜ್ಯ ಸರ್ಕಾರದ ವಿವೇಚನೆಗೆ ನೀಡುವಂತಹ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025ಕ್ಕೆ ಬಿಜೆಪಿ ಸಭಾ ತ್ಯಾಗದ ನಡುವೆ ಅನುಮೋದನೆ ಪಡೆಯಲಾಯಿತು.
ನಿಷೇಧಿತ ಪಿಎಫ್ಐನ ರಾಜಕೀಯ ಮುಖವಾಣಿಯಾದ ಎಸ್ಡಿಪಿಐನ ಅಧ್ಯಕ್ಷ ಎಂ.ಕೆ.ಫೈಜಿ ಬಂಧನದ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್ಡಿಪಿಐಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.