2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 6,88,678 ವಿದ್ಯಾರ್ಥಿಗಳಲ್ಲಿ 4,76,256 ಮಂದಿ ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇ.69.16 ರಷ್ಟು ಫಲಿತಾಂಶ ದಾಖಲಾಗಿದ್ದು, ಕಳೆದ ಬಾರಿಗಿಂತ (ಶೇ.81.15) ಶೇ.11.99 ರಷ್ಟು ಫಲಿತಾಂಶ ಕುಸಿದಿದೆ.
ಗ್ರಾಮೀಣ ಬ್ಯಾಂಕ್ಗಳ ಕಾರ್ಯಾಚರಣೆಯಲ್ಲಿನ ಸುಧಾರಣೆ ಉದ್ದೇಶದಿಂದ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ‘ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಆರ್ಆರ್ಬಿ)’ ಯೋಜನೆ ಮೇ 1ರಿಂದಲೇ ಅನುಷ್ಠಾನಕ್ಕೆ ಬರಲಿದೆ. ಅದರಂತೆ ಕರ್ನಾಟಕ 2 ಗ್ರಾಮೀಣ ಬ್ಯಾಂಕ್ಗಳು ಇನ್ನು ಒಂದಾಗಲಿವೆ.
ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ಆ ಪ್ರಕರಣಗಳ ತನಿಖೆ ಸಲುವಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.
ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಇತರೆ ಆರೋಪಿಗಳ ಮೇಲಿನ ವಿಚಾರಣೆಗೆ ತಡೆ ನೀಡಲಾಗಿದೆ ಎಂಬ ಆಧಾರದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಜಾಮೀನು ಕೋರಲಾಗದು ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಈರುಳ್ಳಿ ಮತ್ತು ಟೊಮೆಟೋ ಬೆಲೆ ದಿಢೀರ್ ಕುಸಿತ ಕಂಡಿದ್ದು, ಆಕ್ರೋಶಗೊಂಡ ಬೆಳೆಗಾರರು ಈರುಳ್ಳಿ ಮತ್ತು ಟೊಮೆಟೋವನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ನಡೆಸಿದ ಘಟನೆ ಹೂವಿನಹಡಗಲಿಯಲ್ಲಿ ನಡೆದಿದೆ.
ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಗಂಡಸರಿಗೆ ಸೀರೆ ಉಡಿಸಿ ಮಹಿಳೆಯರು ಪಾಲ್ಗೊಂಡ ದಾಖಲೆ ತೋರಿಸಿ ಹಣ ಲಪಟಾಯಿಸಲು ನಡೆದ ಸಂಚೊಂದು ಬಹಿರಂಗವಾಗಿದೆ.
ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಅಲ್ಲೊಂದು ಇಲ್ಲೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತವೆ. ಅದು ಸ್ವಾಭಾವಿಕವಾಗಿ ಜನರ ಗಮನ ಸೆಳೆಯುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರ ರಸ್ತೆ ಅಥವಾ ನೆಲಮಂಗಲ, ಕುಣಿಗಲ್ ರಸ್ತೆ ಎರಡರಲ್ಲಿ ಒಂದನ್ನು ಅಂತಿಮಗೊಳಿಸಲು ಇಂದಿನಿಂದ (ಏ.7) ಮೂರು ದಿನ ಕೇಂದ್ರದ ತಂಡ ಪರಿಶೀಲನೆ ನಡೆಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.