ಪ್ರತಿ ಎಕರೆಗೆ 2.50 ಕೋಟಿ ಭೂ ಪರಿಹಾರಕ್ಕೆ ರೈತರ ಆಗ್ರಹದಾಬಸ್ಪೇಟೆ: ದಕ್ಷಿಣಕಾಶಿ ಶಿವಗಂಗೆ ಸುತ್ತಮುತ್ತ ಕೈಗಾರಿಕೆಗಳ ಸ್ಥಾಪನೆಗೆ ರೈತರ ಫಲವತ್ತಾದ ಭೂಮಿಯನ್ನು ಭೂಸ್ವಾಧೀನಪಡಿಸಿಕೊಂಡು ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗಬಾರದು, ಯಾವುದೇ ಕಾರಣಕ್ಕೂ ನಾವು ಜಮೀನನ್ನು ಕೊಡುವುದಿಲ್ಲ, ಜಮೀನನ್ನು ಪಡೆಯುವುದಾದರೆ ದುಪ್ಪಟ್ಟು ಪರಿಹಾರ ನೀಡಬೇಕು ಎಂದು ರೈತರು ಕೆಐಎಡಿಬಿ ಅಧಿಕಾರಿಗಳನ್ನು ಆಗ್ರಹಿಸಿದ್ದಲ್ಲದೆ ಹಲವು ಬೇಡಿಕೆಗಳನ್ನು ಅಧಿಕಾರಿಗಳ ಮುಂದಿಟ್ಟರು.