ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.22ರಂದು ಅಖಂಡ ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.
ಹಲವು ಮೊದಲನ್ನು ಸಾಧಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣ, ಇದೀಗ ದೇಶದಲ್ಲಿಯೇ ಮೊದಲ ಬಾರಿಗೆ ಅತಿದೊಡ್ಡ ‘ಗ್ರೀನ್ಫೀಲ್ಡ್ ಕಾರ್ಗೋ ಟರ್ಮಿನಲ್’ ಕಾರ್ಯಾರಂಭಿಸಿದೆ.
ರಿಯಲ್ ಎಸ್ಟೇಟ್ ಲಾಬಿಗೆ ಮಣಿದು ಹೆಬ್ಬಾಳದಲ್ಲಿ ನಮ್ಮ ಮೆಟ್ರೋಗೆ ನೀಡಲು ಪ್ರಸ್ತಾಪಿಸುವ 45 ಎಕರೆ ಜಾಗವನ್ನು ಖಾಸಗಿ ಸಂಸ್ಥೆಯ ಹೋಟೆಲ್, ರೆಸ್ಟೋರೆಂಟ್, ಮಾಲ್ ಸೇರಿದಂತೆ ಪ್ರೀಮಿಯಂ ಟೌನ್ಶಿಪ್ ನಿರ್ಮಾಣಕ್ಕೆ ನೀಡಬಾರದು ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.
ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಮುಂದಿನ ಒಂದು ವಾರದೊಳಗೆ ₹3,400 ಕೋಟಿ ರು. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ರಾಜ್ಯದ ಹಲವೆಡೆ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿದ್ದು, ಇದರಿಂದ ಆರೋಗ್ಯಕ್ಕೆ ಮಾರಕವಾಗುವ ಕ್ಯಾನ್ಸರ್ಕಾರಕ ಅಂಶ ಇಡ್ಲಿ ಜತೆ ಸೇರುತ್ತಿದೆ.
ರಾಜ್ಯದಲ್ಲೂ ಹಕ್ಕಿಜ್ವರದ ಆತಂಕ ಶುರುವಾಗಿದ್ದು, ಚಿಕ್ಕಬಳ್ಳಾಪುರಲ್ಲಿ ಎರಡು ಕೋಳಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದೇ ವೇಳೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಲವೆಡೆ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಭೀತಿ ಆವರಿಸಿದೆ.