ತಾಂತ್ರಿಕ ಪ್ರಸ್ತಾವನೆಗೆ ಅನುಮೋದನೆ ಪಡೆಯುವಿಕೆ ವಿಳಂಬ ಹಿನ್ನೆಲೆಯಲ್ಲಿ ಆರ್.ವಿ.ರಸ್ತೆ - ಬೊಮ್ಮಸಂದ್ರ (19.15ಕಿಮೀ) ಸಂಪರ್ಕಿಸುವ ನಮ್ಮ ಮೆಟ್ರೋ ಮಾರ್ಗ ಜನಸಂಚಾರಕ್ಕೆ ಮುಕ್ತವಾಗುವುದು ಇನ್ನಷ್ಟು ವಿಳಂಬ
ನಗರದ ಬನಶಂಕರಿ 6ನೇ ಹಂತದ ಬಡಾವಣೆ ಅಭಿವೃದ್ಧಿಗಾಗಿ ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ಹೆಮ್ಮಿಗೆಪುರ, ಗಾಣಕಲ್ಲು ಮತ್ತಿತರ ಗ್ರಾಮಗಳಲ್ಲಿನ ಭೂ ಸ್ವಾಧೀನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯದಲ್ಲಿ ಪ್ರತಿ ತಿಂಗಳು ಸುಮಾರು 40 ಸಾವಿರ ನಾಯಿ ಕಡಿತದ ಪ್ರಕಣಗಳು ವರದಿಯಾಗುತ್ತಿದ್ದು, ನಾಯಿ ಕಡಿತದಿಂದ ಜೀವ ಉಳಿಸುವ ಆ್ಯಂಟಿ ರೇಬೀಸ್ ಲಸಿಕೆ (ಎಆರ್ವಿ) ಮತ್ತು ರೇಬಿಸ್ ಇಮ್ಯುನೊಗ್ಲೋಬುಲಿನ್ ಔಷಧ ಸಾಕಷ್ಟು ಲಭ್ಯವಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಬಿಎಂಪಿಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಹೋಟೆಲ್ ಉದ್ಯಮ ದೇಶದ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದು, 30 ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಶ್ಲಾಘಿಸಿದರು.
ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ.
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರುನುಮ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಕ್ಷಮೆಯಾಚಿಸುವಂತೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್.ರವಿಕುಮಾರ್ಗೆ ಹೈಕೋರ್ಟ್ ತಾಕೀತು ಮಾಡಿದೆ.
ಬಿಬಿಎಂಪಿಯ ಮಳೆಗಾಲದ ಸಿದ್ಧತೆಯ ವಾಸ್ತವವನ್ನು ಮೇ ತಿಂಗಳ ಬೇಸಿಗೆ ಕಾಲದ ಮಳೆಯೇ ಬಟಾ ಬಯಲು ಮಾಡಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿ ಜಲಸಾರಿಗೆ ಶುರುವಾಗಿದ್ದು, ಪ್ರಾಣಾಪಾಯ ನಷ್ಟ-ಕಷ್ಟಗಳ ಬಗ್ಗೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರನ್ನು ಪಾಕಿಸ್ತಾನಿ ಎಂದಿರುವ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ್ ವಿರುದ್ಧ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರಿಗೆ ದೂರು ನೀಡಲು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರು ನಿರ್ಧರಿಸಿದ್ದಾರೆ.