ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಮುಂದಾದ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಿ.ಎಸ್.ಬಸವೇಶ್ಗೆ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.
ಕೇಂದ್ರ ಸರ್ಕಾರವು ಕರ್ನಾಟಕ ರೈಲ್ವೆಗೆ ಹೆಚ್ಚಿನ ಅನುದಾನ ನೀಡಿದೆ. ಯುಪಿಎ ಅವಧಿಗಿಂತ ಒಂಬತ್ತು ಪಟ್ಟು ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ಚಿನಿ ವೈಷ್ಣವ್ ಹೇಳಿದ್ದಾರೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜಪ್ತಿ ಮಾಡಲಾದ ಕೋಟ್ಯಂತರ ರುಪಾಯಿ ಮೌಲ್ಯದ ಚಿನ್ನಾಭರಣಗಳು ಸೇರಿ ಇನ್ನಿತರ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ವಿಶೇಷ ನ್ಯಾಯಾಲಯ ಪೂರ್ಣಗೊಳಿಸಿದೆ.
‘ನಮ್ಮ ಮೆಟ್ರೋ’ ದರ ಏರಿಕೆ ವಿಚಾರದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರದ ಬಿಜೆಪಿ ಸರ್ಕಾರದ ಸಚಿವರು ಪರಸ್ಪರ ಹೊಣೆಗಾರಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ.
ದೇಶದ ಇತರೆ ಮೆಟ್ರೋ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯ, ರಿಯಾಯಿತಿ ನೀಡಲಾಗಿದೆ. ಆದರೆ ಇಡೀ ದೇಶದಲ್ಲಿ ಅತ್ಯಂತ ದುಬಾರಿ ಟಿಕೆಟ್ ದರ ವಿಧಿಸುವ ‘ನಮ್ಮ ಮೆಟ್ರೋ’ದಲ್ಲಿ ಮಾತ್ರ ಯಾವುದೇ ಸೌಲಭ್ಯ ಇಲ್ಲ. ಹಾಗಾಗಿ ಬಿಎಂಆರ್ಸಿಎಲ್ ಸಹ ಪ್ರಯಾಣಿಕರಿಗೆ ಸೌಲಭ್ಯ ಒದಗಿಸುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ.
‘ಮುಂದಿನ ಚುನಾವಣೆ ಗೆಲ್ಲಬೇಕು ಎಂದರೆ ನಮಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮಗೆ ಬೇಕೇ ಬೇಕು. ಮತ್ತೊಂದು ಅವಧಿವರೆಗೂ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಮುಂದಿನ ನಾಯಕತ್ವ ಬೆಳೆಸುವವರೆಗೆ ಇರಬೇಕು’ ಎಂದು ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಡಾ.ಎಚ್.ಸಿ. ಮಹದೇವಪ್ಪ ಅಭಿಪ್ರಾಯ ಪಟ್ಟಿದ್ದಾರೆ
ಕಾಂಗ್ರೆಸ್ ಆಂತರಿಕ ರಾಜಕಾರಣ ಇದೀಗ, ಮುಂದಿನ ಚುನಾವಣೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವ ಇರಬೇಕು ಎಂಬಲ್ಲಿಗೆ ಬಂದು ನಿಂತಿದ್ದು, ತನ್ಮೂಲಕ ನವೆಂಬರ್ ಅಥವಾ ಅಕ್ಟೋಬರ್ ಕ್ರಾಂತಿಗೆ ಪೂರ್ವ ಕಿಡಿಗಳು ರಾಜ್ಯ ರಾಜಕಾರಣದ ಅಂಕಣದಲ್ಲಿ ಭರ್ಜರಿಯಾಗಿ ಸಿಡಿಯತೊಡಗಿವೆ.
ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಕಲ್ಲು ತೂರಾಟದಂತಹ ದಾಂಧಲೆಗೆ ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಬುಲ್ಡೋಜರ್ ಹತ್ತಿಸುವ ಕ್ರಮ ಇದೆ. ಕರ್ನಾಟಕದಲ್ಲೂ ಆ ಪರಿಸ್ಥಿತಿ ಬಂದರೆ ನೋಡೋಣ. ಈಗ ಅಂತಹ ಪರಿಸ್ಥಿತಿ ಕರ್ನಾಟಕದಲ್ಲಿ ಇಲ್ಲ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್ ಹೇಳಿದರು.
ಆರೂವರೆ ದಶಕಗಳಷ್ಟು ಹಳೆಯದಾದ ಆದಾಯ ತೆರಿಗೆ ಕಾಯ್ದೆ-1961ರ ಬದಲಿಗೆ ಆದಾಯ ತೆರಿಗೆ ಕಾನೂನಿಗೆ ಸರಳತೆ, ಸ್ಪಷ್ಟತೆ ಹಾಗೂ ಪಾರದರ್ಶಕತೆ ತರುವುದರ ಜತೆಗೆ ಜನಸಾಮಾನ್ಯರಿಗೂ ಅರ್ಥವಾಗುವಂತೆ ಸರಳ ಭಾಷೆಯಲ್ಲಿ ಒದಗಿಸಲು ಕೇಂದ್ರ ಸರ್ಕಾರವು ‘ಆದಾಯ ತೆರಿಗೆ ಮಸೂದೆ-2025’ ಮಂಡಿಸಿದೆ.