ಮದರಸಾಗಳಲ್ಲಿ ಭಾರತ ವಿರೋಧಿ ಪಾಠ ಹೇಳಿ ಕೊಡಲಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯು ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿ ಕೋಲಾಹಲ ಸೃಷ್ಟಿಸಿತು.
ರಾಜ್ಯಾದ್ಯಂತ ಬಿರುಬಿಸಿಲಿನ ತಾಪ ಮೇಲೇರುತ್ತಿರುವ ಮಧ್ಯೆಯೇ ಗುರುವಾರ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ವಿಜಯನಗರ, ಹಾವೇರಿ ಹಾಗೂ ಗದಗ ಜಿಲ್ಲೆಯ ಕೆಲವೆಡೆ ಗುರುವಾರ ಗುಡುಗು-ಮಿಂಚು ಸಹಿತ ಕೆಲ ಗಂಟೆಗಳ ಕಾಲ ಮಳೆಯಾಗಿದೆ.
ಗೋವು ಸಂರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡದೆ, ನಿರ್ಲಕ್ಷವಹಿಸಿದೆ ಎಂದು ಬಿಜೆಪಿ ಶಾಸಕ ಶರಣು ಸಲಗರ ಮಾತಿಗೆ, ಕಾಂಗ್ರೆಸ್ ಸಚಿವರು ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಸದನದಲ್ಲಿ ಗದ್ದಲ ಏರ್ಪಟ್ಟಿತು.
ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಹಾಗೂ ಆಲುಗಡ್ಡೆ ಮಾರಾಟವನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡುತ್ತಿರುವುದಕ್ಕೆ ವರ್ತಕರ ವಲಯ ತೀವ್ರ ವಿರೋಧಿಸಿದ್ದು, ಸ್ಥಳಾಂತರ ಪ್ರಕ್ರಿಯೆ ಸರಳವಾಗಿ ಸಾಗುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ.
ರಾತ್ರಿ ವೇಳೆ ಉದ್ಯೋಗ ಮಾಡುವವರು, ಸಂಚರಿಸುವವರು ಇರುವುದರಿಂದ ಪಬ್ ತಡರಾತ್ರಿವರೆಗೆ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿ ಗೃಹ ಸಚಿವರು ಹಾಗೂ ಅಬಕಾರಿ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು
ಮಾ.22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಬಂದ್ ಹಿನ್ನೆಲೆಯಲ್ಲಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಸಿನಿಮಾ ಪ್ರದರ್ಶನ ರದ್ದುಗೊಳಿಸಿದೆ.
ಬೆಂಗಳೂರಿನ ನಗರದ ಸ್ಯಾಂಕಿ ಕೆರೆಯ ಬಫರ್ ವಲಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ಜಲಮಂಡಳಿಗೆ ಹೈಕೋರ್ಟ್ ಅನುಮತಿ ನೀಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಗಳು ನಡೆಯಲಿವೆ. ಕಳೆದ ಬಾರಿಯಂತೆ ಈ ಸಾಲಿನಲ್ಲೂ ಸಿ.ಸಿ,ಕ್ಯಾಮೆರಾ, ವೆಬ್ಕಾಸ್ಟಿಂಗ್ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿವೆ.
ರಾಜ್ಯದಲ್ಲಿ ವಾರ್ಷಿಕ ವಿದ್ಯುತ್ ದರ ಪರಿಷ್ಕರಣೆಗೂ ಮೊದಲೇ ಕೆಪಿಟಿಸಿಎಲ್, ಎಸ್ಕಾಂಗಳ ನೌಕರರ ಪಿಂಚಣಿ, ಗ್ರ್ಯಾಚುಟಿ ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸುವ ಮೂಲಕ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಹೊಸ ಶಾಕ್ ನೀಡಿದೆ.
ಬೃಹತ್ ಹನಿಟ್ರ್ಯಾಪ್ ಜಾಲದ ವಿಚಾರ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿದೆ. ‘ಈ ಜಾಲದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಎಲ್ಲಾ ಪಕ್ಷಗಳ 48 ನಾಯಕರು ಸಿಲುಕಿದ್ದು, ಅವರ ಪೆನ್ಡ್ರೈವ್ಗಳಿವೆ’ ಎಂಬ ಮಾಹಿತಿಯನ್ನು ಸಹಕಾರ ಸಚಿವ ಕೆ. ರಾಜಣ್ಣ ಸದನದಲ್ಲಿ ಬಹಿರಂಗಪಡಿಸಿದ್ದಾರೆ.