ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಕರ್ನಾಟಕ ಮೈಕ್ರೊ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ತರುವ ಕುರಿತು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬೆದರಿಕೆ ವರ್ತನೆ ವಿರುದ್ಧ ಕಠಿಣ ಕ್ರಮದ ಕುರಿತು ರಾಜ್ಯ ಸರ್ಕಾರದ ಎಚ್ಚರಿಕೆಯ ಹೊರತಾಗಿಯೂ, ಹಣಕಾಸು ಸಂಸ್ಥೆಗಳ ದಾದಾಗಿರಿ ಮುಂದುವರೆದಿದ್ದು ಜನರನ್ನು ಹೈರಾಣಾಗಿಸಿದೆ
ಕೊರೋನಾ ಭೀತಿ, ಎಚ್ಎಂಪಿವಿ ವೈರಸ್ ಭೀತಿಯ ಬೆನ್ನಲ್ಲೇ ರಾಜ್ಯದಲ್ಲಿ ವರ್ಷದ ಮೊದಲ ಮಂಕಿ ಪಾಕ್ಸ್ (ಎಂಪಾಕ್ಸ್) ಸೋಂಕು ಪ್ರಕರಣ ದೃಢಪಟ್ಟಿದ್ದು, ಆತಂಕ ಮೂಡಿಸಿದೆ.
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಸರ್ಕಾರ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪೈಲ್ವಾನ್’ ಚಿತ್ರಕ್ಕೆ ದೊರೆತಿದ್ದ 2019ನೇ ಸಾಲಿನ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ‘ಬೇರೆ ಅರ್ಹ ಕಲಾವಿದರಿಗೆ ಕೊಡಿ. ಅರ್ಹರಲ್ಲೊಬ್ಬರಿಗೆ ಪ್ರಶಸ್ತಿ ಸಿಕ್ಕರೆ ನನಗೆ ಅದೇ ಸಂತೋಷ’ ಎಂದು ಅವರು ಹೇಳಿದ್ದಾರೆ.
ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗ ಬಳಕೆಗೆ ಬರೋಬ್ಬರಿ 3,011 ಕೋಟಿ ರು. ಮೊತ್ತದ ಟಿಡಿಆರ್ ಪರಿಹಾರ ನೀಡಲು ನ್ಯಾಯಾಲಯ ನೀಡಿರುವ ಆದೇಶದಿಂದ ಪಾರಾಗಲು ರಸ್ತೆ ಅಗಲೀಕರಣ ಪ್ರಸ್ತಾವನೆಯನ್ನೇ ಕೈಬಿಡುವ ಕುರಿತು ನಿರ್ಧಾರ ಕೈಗೊಳ್ಳಲು ತುರ್ತು ಸಭೆ ಕರೆಯಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿರುವ ನಮ್ಮ ಕ್ಲಿನಿಕ್ಗಳ ಸೇವೆಯನ್ನು ಹೆಚ್ಚಿನ ಸಂಖ್ಯೆಯ ಸಾರ್ವಜನಿಕರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಪಾಲಿಕೆ ಪ್ರತಿ ಕ್ಲಿನಿಕ್ನಲ್ಲಿ ದಿನಕ್ಕೆ ಕನಿಷ್ಠ 100 ರೋಗಿಗಳ ಚಿಕಿತ್ಸೆ ನೀಡುವ ಗುರಿ ಹಾಕಿಕೊಂಡಿದೆ.
ಭಾರತದ ಅತೀ ದೊಡ್ಡ ಕಲೆ, ಸಂಸ್ಕೃತಿಯ ವಾರ್ಷಿಕ ಸಮ್ಮೇಳನವಾದ ಭಾವ್ 2025: ದಿ ಎಕ್ಸ್ಪ್ರೆಷನ್ಸ್ ಸಮ್ಮಿಟ್ ಜ. 23ರಿಂದ 26ರವರೆಗೆ ನಡೆಯಲಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಜನರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ತೊಂದರೆ ಆಗುತ್ತಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಮುಕ್ತವಾಗಿ ಚರ್ಚೆ ಮಾಡಲು ಸಿದ್ಧರಿದ್ದೇವೆ. ಜನತೆ ವದಂತಿ ನಂಬಬಾರದು ಎಂದು ಮೈಕ್ರೋ ಫೈನಾನ್ಸ್ ಇಂಡಸ್ಟ್ರೀ ನೆಟ್ವರ್ಕ್ ರಾಜ್ಯ ಮುಖ್ಯಸ್ಥ ರಾಮ ಕಾಮರಾಜು ಹೇಳಿದರು.