ಯತ್ನಾಳರು ಈಗಾಗಲೇ ಎರಡು ಬಾರಿ ಉಚ್ಚಾಟನೆ ಆಗಿ, ಈಗ ಮೂರನೇ ಬಾರಿಗೆ ಪಕ್ಷದಿಂದ ಉಚ್ಚಾಟನೆ ಆಗಿದ್ದಾರೆ. ಉಚ್ಚಾಟನೆ ಮಾಡ್ತಾರೆ, ಮತ್ತೆ ಮರಳಿ ಕರ್ಕೊಳ್ತಾರೆ ಅಂತಾಗಬಾರದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ಎಲ್ಲ ಇಲಾಖೆ ಮತ್ತು ಪ್ರಾಧಿಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಂಬಂಧಿಸಿ ನಡೆಸುವ ತನ್ನ ಅಧಿಕೃತ ವ್ಯವಹಾರಗಳಲ್ಲಿ ದಲಿತ ಪದ ಬಳಕೆ ಮಾಡದಂತೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಗೆ ನಿವೃತ್ತ ನ್ಯಾಯಮೂರ್ತಿ ನ್ಯಾ.ಶಿವರಾಜ ವಿ.ಪಾಟೀಲ, ಸಾಹಿತಿ ಕುಂ.ವೀರಭದ್ರಪ್ಪ(ಕುಂ.ವೀ) ಮತ್ತು ಹಿಂದೂಸ್ತಾನಿ ಗಾಯಕ ಎಂ.ವೆಂಕಟೇಶ್ಕುಮಾರ್ ಭಾಜನರಾಗಿದ್ದಾರೆ
ಒಂಬತ್ತು ಜಿಲ್ಲೆಗಳಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಗೆ ಬದಲಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.