ಶಾಸಕರ ವೇತನ ಹೆಚ್ಚಳ ಮಾಡುವ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್ನ ಕಲಾಪ ಸಲಹಾ ಸಮಿತಿಗಳ ಜಂಟಿ ಸಭೆಯಲ್ಲಿ ಪ್ರಸ್ತಾಪವಾಗಿದೆ.
ಗೃಹ ಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪುವುದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದ್ದು, ಎರಡು ತಿಂಗಳ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡುವ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೀಡಿದ ನಟ್, ಬೋಲ್ಟ್ ಟೈಟ್ ಮಾಡುತ್ತೇನೆ ಎಂಬ ಹೇಳಿಕೆ ಪ್ರತಿಕ್ರಿಯೆಗಳು ಇನ್ನೂ ಮುಂದುವರಿದಿವೆ. ರಾಜಕೀಯ ನಾಯಕರು, ಚಿತ್ರ ನಟರು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ದುಡ್ಡಿನ ದುರಹಂಕಾರದಿಂದ ಉಪ ಮುಖ್ಯಮಂತ್ರಿಗಳ ವಿರುದ್ಧ ಮಾತನಾಡುತ್ತಿದ್ದು, ಅವರು ಬಾಯ್ಮುಚ್ಚಿಕೊಂಡಿರಬೇಕು. ಇದು ಅವರಿಗೆ ಕೊನೆಯ ಎಚ್ಚರಿಕೆ ಎಂದು ಶಾಸಕ ರವಿ ಗಣಿಗ ಎಚ್ಚರಿಕೆ ನೀಡಿದ್ದಾರೆ.
ವಿದ್ಯುತ್ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ನಷ್ಟದಲ್ಲಿದ್ದು, 1000 ನೌಕರರು ಮತ್ತು ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗೆಲ್ಲಲು ಗ್ಯಾರಂಟಿ ಯೋಜನೆಗಳು ವಾಮಮಾರ್ಗವಾಗಿವೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮೆಟ್ರೋ ರೈಲು ಯೋಜನೆಯ ಹಂತ-2ಎ ಅಡಿಯಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಕೆ.ಆರ್.ಪುರ ಮಾರ್ಗದವರೆಗಿನ ಹೊರವರ್ತುಲ ರಸ್ತೆಯ ಮಾರ್ಗದಲ್ಲಿ ಬರುವ ಕಾಡುಬೀಸನಹಳ್ಳಿ ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಎಂಬಸಿ ಆಫೀಸ್ ಪಾರ್ಕ್ಸ್ (ಆರ್ಇಐಟಿ) ₹100 ಕೋಟಿ ನೀಡಲು ಬಿಎಂಆರ್ಸಿಎಲ್ ಜೊತೆ ಒಪ್ಪಂದ ಮಾಡಿಕೊಂಡಿದೆ.
ಸರ್ಕಾರದ ಹಣಕಾಸು ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರಿಗೆ ಏಪ್ರಿಲ್ನಲ್ಲಿ ಬಾಕಿ ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕಳೆದ ಸರ್ಕಾರದ ಅವಧಿಯಲ್ಲಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದ್ದ 40 ಪರ್ಸೆಂಟ್ ಕಮಿಷನ್ ವಿಚಾರ ಈ ಸರ್ಕಾರದ ಅವಧಿಯಲ್ಲೂ ಮುನ್ನಲೆಗೆ ಬಂದಿದ್ದು, ಹಿಂದಿಗಿಂತ ಈಗ ಕಮಿಷನ್ ಪ್ರಮಾಣ ಹೆಚ್ಚಳವಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಆರೋಪಿಸಿದೆ