ಆಂಧ್ರಪ್ರದೇಶಕ್ಕೆ ಎಚ್ಎಎಲ್ ವಿಮಾನ ತಯಾರಿಕೆ ಘಟಕ ಸ್ಥಳಾಂತರಿಸಬೇಕೆಂಬ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮನವಿ ಸರಿಯಲ್ಲ. ಬೇಕಿದ್ದರೆ ಅವರ ರಾಜ್ಯದಲ್ಲಿ ಎಚ್ಎಎಲ್ ಘಟಕ ಸ್ಥಾಪಿಸಲು ಮನವಿ ಮಾಡಿಕೊಳ್ಳಲಿ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಮೈಸೂರು ಸ್ಯಾಂಡಲ್ ಗೆ ನಟಿ ತಮನ್ನಾ ಬಾಟಿಯಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿದ್ದಕ್ಕೆ ನಮ್ಮ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಮೈಸೂರು ಸ್ಯಾಂಡಲ್ ಸೋಪ್ಗೆ ರಾಯಭಾರಿಯಾಗಿ ಮುಂದಿನ ದಿನಗಳಲ್ಲಿ ಶೇ.99 ಕನ್ನಡಿಗರಿಗೇ ಆದ್ಯತೆ ನೀಡುತ್ತೇವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಮುಂಗಾರು ಮಳೆ ಪದಾರ್ಪಣೆಯಾಗಿ ಒಂದೇ ದಿನಕ್ಕೆ ಕರಾವಳಿ, ಮಲೆನಾಡು ಸೇರಿ ಒಳನಾಡಿನ ವಿವಿಧ ಜಿಲ್ಲೆಗಳನ್ನು ಪ್ರವೇಶಿಸಿದ್ದು, ಉತ್ತಮ ಮಳೆಯಾಗುತ್ತಿದೆ
ಬೆಟ್ಟಿಂಗ್ ಅಥವಾ ಜೂಜಾಟದ ಉದ್ದೇಶವಿಲ್ಲದೆ ಕೇವಲ ಮನರಂಜನೆಯ ಕಾರಣಕ್ಕೆ ಇಸ್ಪೀಟ್ ಆಡುವುದು ನೈತಿಕವಾಗಿ ತಪ್ಪಲ್ಲ ಎಂದು ಕರ್ನಾಟಕದ ವ್ಯಕ್ತಿಯೊಬ್ಬರ ಪ್ರಕರಣದ ತೀರ್ಪಿನ ವೇಳೆ ಸುಪ್ರೀಂಕೋರ್ಟ್ ಹೇಳಿದೆ.
ಪಹಲ್ಗಾಂನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಇಲ್ಲಿನ ವಿಜಯನಗರದ ನಿವಾಸಿ ಮಂಜುನಾಥ್ ರಾವ್ ಅವರ ಮನೆಗೆ ಭಾನುವಾರ ಅಸ್ಸಾಂ ರಾಜ್ಯದ ಕೈಗಾರಿಕಾ ಸಚಿವ ಬಿಮಲ್ ಬೋರಾ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದೇ ಮೇ 12ರಂದು ಹೊರಡಿಸಿರುವ ಸರ್ಕಾರದ ವರ್ಗಾವಣೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಹಾಗೂ ಪ್ರಮುಖ ಏಳು ಆಕ್ಷೇಪಣೆಗಳು ಉದ್ಭವಿಸದಂತೆ ಎಚ್ಚರ ವಹಿಸಿ ವರ್ಗಾವಣೆ ಆದೇಶ ಮಾಡುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು/ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶಿಸಿದ್ದಾರೆ.
ತೀವ್ರ ಮಾತಿನ ಚಕಮಕಿ ನಡುವೆ ಬೆಂಗಳೂರು ಹಾಲು ಒಕ್ಕೂಟ ನಿಯಮಿತದ (ಬಮುಲ್) ಒಂಬತ್ತು ನಿರ್ದೇಶಕ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಏಳು ಸ್ಥಾನ ಗಳಿಸಿ ಪಾರಮ್ಯ ಸಾಧಿಸಿದ್ದಾರೆ.
ಖಾಸಗಿ ಲೇಔಟ್ಗೆ ರಸ್ತೆ ನಿರ್ಮಿಸಲು ಮತ್ತು ಅಕ್ರಮ ಕಲ್ಲು ಗಣಿಗಾರಿಕೆ ನಡೆಸಲು ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಗೋಮಾಳ ಜಮೀನು ಸೇರಿದಂತೆ ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 74.98 ಕೋಟಿ ರು. ಮೌಲ್ಯದ 19.3 ಎಕರೆ ಜಮೀನನನ್ನು ನಗರ ಜಿಲ್ಲಾಡಳಿತ ವಶಕ್ಕೆ ಪಡೆದಿದೆ.
ವಕೀಲಿಕೆ ನಡೆಸಲು ಕರ್ನಾಟಕ ವಕೀಲರ ಪರಿಷತ್ನಲ್ಲಿ ಸನ್ನದು ನೋಂದಣಿ ಮಾಡಿಕೊಂಡ ನಂತರ ನ್ಯಾಯಾಂಗ ಸೇರಿ ಸರ್ಕಾರದ ವಿವಿಧ ಇಲಾಖೆಯಲ್ಲಿ ಉದ್ಯೋಗಕ್ಕೆ ಸೇರಿರುವ ಒಟ್ಟು 830 ಜನ ತಮ್ಮ ಸನ್ನದು ಅಮಾನತು ಪಡಿಸಿಕೊಂಡಿದ್ದಾರೆ.