ನಗರದಲ್ಲಿ 12 ಸಾವಿರ ರಸ್ತೆ ಗುಂಡಿಗಳಿದ್ದು, ಅದರಲ್ಲಿ 7 ಸಾವಿರಕ್ಕೂ ಹೆಚ್ಚಿನ ಗುಂಡಿಗಳನ್ನು ಮುಚ್ಚಲಾಗಿದೆ. ಉಳಿದ 5 ಸಾವಿರ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
46 ಹಿಂದೂ ಜಾತಿಗಳ ಹೆಸರನ್ನು ಕ್ರಿಶ್ಚಿಯನ್ ಜತೆ ತಳಕುಹಾಕಿ ಸಿದ್ಧಪಡಿಸಿದ್ದ ಜಾತಿಗಳ ಪಟ್ಟಿಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಆನ್ಲೈನ್ ಸಮೀಕ್ಷಾ ನಮೂನೆಯಿಂದ 33 ಜಾತಿಗಳ ಹೆಸರು ಕೈಬಿಡಲು ಹಿಂದುಳಿದ ವರ್ಗಗಳ ಆಯೋಗ ನಿರ್ಧರಿಸಿದೆ.
ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿ ದರ ಇಳಿಸಿರುವ ಹಿನ್ನೆಲೆಯಲ್ಲಿ ದಸರಾ ಹಬ್ಬಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿರುವ ಕೆಎಂಎಫ್, ಮೊಸರು ಹೊರತುಪಡಿಸಿ ಹಾಲಿನ ಉತ್ಪನ್ನಗಳಾದ ಬೆಣ್ಣೆ, ತುಪ್ಪ, ಚೀಸ್ ಸೇರಿ ಇತರೆ ಉತ್ಪನ್ನಗಳ ಮಾರಾಟ ದರ ಪರಿಷ್ಕರಿಸಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿವಿಧ ಸೇವೆಗಳ ದರಗಳಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಪರಿಷ್ಕೃತ ದರ ಸೆ.1ರಿಂದಲೇ ಜಾರಿಗೆ ಬಂದಿದೆ.
ಯಶ್ ನಟನೆ, ನಿರ್ಮಾಣದ ಅದ್ದೂರಿ ಬಜೆಟ್ ಚಿತ್ರ ‘ಟಾಕ್ಸಿಕ್’ನ ಮುಂಬೈ ಶೆಡ್ಯೂಲ್ ಶೂಟಿಂಗ್ ಮುಕ್ತಾಯಗೊಂಡಿದೆ.
ಬಹುಭಾಷೆಯಲ್ಲಿ ಮೂಡಿ ಬರುತ್ತಿರುವ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರದಲ್ಲಿ ನಟಿ ಅರ್ಚನಾ ಕೊಟ್ಟಿಗೆ ನಟಿಸುತ್ತಿದ್ದಾರೆ.
ಹಾಲಿ ಚಾಂಪಿಯನ್ ಭಾರತ ಹ್ಯಾಟ್ರಿಕ್ ಗೆಲುವಿನೊಂದಿಗೆ ಸೂಪರ್-4 ಹಂತ ಪ್ರವೇಶಿಸಿದೆ. ತಂಡ ಗುಂಪು ಹಂತದ ಕೊನೆ ಪಂದ್ಯದಲ್ಲಿ ಶುಕ್ರವಾರ ಒಮಾನ್ ವಿರುದ್ಧ 21 ರನ್ ಪ್ರಯಾಸದ ಗೆಲುವು ಸಾಧಿಸಿತು. ಇದರೊಂದಿಗೆ ‘ಎ’ ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಒಮಾನ್ ಹ್ಯಾಟ್ರಿಕ್ ಸೋಲಿನೊಂದಿಗೆ ಹೊರಬಿತ್ತು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿದ್ದು, ನಮ್ಮ ಸಮಾಜದಲ್ಲಿ ಯಾರಿಗೆ ನ್ಯಾಯ ಸಿಕ್ಕಿದೆ? ಯಾರಿಗೆ ಇನ್ನೂ ಸಿಕ್ಕಿಲ್ಲ ಎನ್ನುವುದು ಗೊತ್ತಾಗಬೇಕು.