ಬೆಸ್ಕಾಂ ಸೇರಿ ರಾಜ್ಯದ ಎಲ್ಲ ಎಸ್ಕಾಂಗಳು ತನ್ನ ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ಮುಂದಾಗಿವೆ. ಸುಮಾರು 60 ಪೈಸೆಯಿಂದ 1 ರು.ವರೆಗೆ ಪ್ರತಿ ಯುನಿಟ್ ದರ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆಇಆರ್ಸಿ)ಕ್ಕೆ ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.
ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣ ಕುರಿತು ಪೊಲೀಸ್ ತನಿಖೆಗೆ ಅನುಮತಿಸಿದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ಸಂಬಂಧ ರಾಜ್ಯಪಾಲರ ಕಚೇರಿಗೆ ವಿಭಾಗೀಯ ಪೀಠ ನೋಟಿಸ್ ಜಾರಿಗೊಳಿಸಿ ತು.
ಕನ್ನಡಪ್ರಭದ ದೆಹಲಿ ಪ್ರತಿನಿಧಿಯಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ, ಬರಹಗಾರ ಡಿ.ಉಮಾಪತಿ ಅವರಿಗೆ ರಾಜ್ಯ ಸರ್ಕಾರದ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆ ಮಾಡುತ್ತಿರುವ ಬಿಐಎಎಲ್ (ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿ.) ನಿಂದ ಫೇರ್ಫ್ಯಾಕ್ಸ್ ಇಂಡಿಯಾ ಹೋಲ್ಡಿಂಗ್ಸ್ ಸಂಸ್ಥೆ ಮತ್ತೆ ಹೆಚ್ಚುವರಿ ಶೇ.10ರಷ್ಟು ಷೇರು ಖರೀದಿಗೆ ಮುಂದಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ ಡಿ.9ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳಿಗೆ ಭಾನುವಾರ ಪರೀಕ್ಷೆ ನಡೆಸಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಕೋರಿಕೆ ಮೇರೆಗೆ ಮೆಟ್ರೋ ರೈಲುಗಳನ್ನು ಬೆಳಗ್ಗೆ 7ಗಂಟೆ ಬದಲಾಗಿ 5.30ಕ್ಕೆ ಆರಂಭಿಸಲಾಗುತ್ತಿದೆ.
ಸುಳ್ಳು ಸುದ್ದಿ ಹರಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಹಾವೇರಿ ಸಿಇಎನ್ ಠಾಣಾ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ನಿಗದಿತ ಅವಧಿಯಲ್ಲಿ ಡಿಮಾಂಡ್ ಡ್ರಾಫ್ಟ್ (ಡಿಡಿ) ಬ್ಯಾಂಕ್ಗೆ ಸಲ್ಲಿಸದೇ ಇದ್ದಾಗ ಆ ಡಿಡಿ ನೀಡಿದ ಗ್ರಾಹಕರ ಖಾತೆಗೆ ಸ್ವಯಂಚಾಲಿತವಾಗಿ ಹಣ ಮರು ಪಾವತಿಯಾಗುವಂತೆ ಮಾರ್ಗಸೂಚಿ ರೂಪಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ಗೆ (ಆರ್ಬಿಐ) ಹೈಕೋರ್ಟ್ ನಿರ್ದೇಶಿಸಿದೆ.
ಚಿಲ್ಲರೆ ಕಾಸಿಗಾಗಿ ಯುವಕನನ್ನು ಅಪಹರಿಸಿ, ಕೊಲೆ ಮಾಡಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಶೋಕಾಸ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂ ಪಾಠಕ್ ಮುಂದೆ ಹಾಜರಾಗಿ ಮಾಹಿತಿ ನೀಡಿದ ಬೆನ್ನಲ್ಲೇ 2ನೇ ಹಂತದ ವಕ್ಫ್ ಹೋರಾಟ ನಡೆಸಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂದಾಗಿದ್ದಾರೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿದ ಆರು ಮಂದಿ ಆರೋಪಿಗಳ ಬಂಧನಕ್ಕೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ಐಎ) ಅಧಿಕಾರಿಗಳು ಗುರುವಾರ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನ 16ಕ್ಕೂ ಅಧಿಕ ಸ್ಥಳಗಳಲ್ಲಿ ಏಕಕಾಲಕ್ಕೆ ಸ್ಥಳೀಯ ಪೊಲೀಸರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ