ವಸತಿ ಸಚಿವ ಜಮೀರ್ ಅಹಮದ್ ಖಾನ್ ಪುತ್ರ ನಟಿಸಿರುವ ‘ಕಲ್ಟ್’ ಚಲನಚಿತ್ರದ ಚಿತ್ರೀಕರಣದ ವೇಳೆ ಡ್ರೋನ್ ಕ್ಯಾಮೆರಾಗೆ ಹಾನಿಯಾಗಿದ್ದರಿಂದ ಆರ್ಥಿಕ ನಷ್ಟವಾಗಿದೆ ಎಂದು ಬೇಸರಗೊಂಡು ಛಾಯಾಗ್ರಾಹಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಕ್ಕಳು ಜೀವನದಲ್ಲಿ ಗುರಿ ಇಟ್ಟುಕೊಂಡು ಜವಾಬ್ದಾರಿಯುತ ಪ್ರಜೆಯಾಗಿ ಬೆಳೆಯಬೇಕು. ಸಂಸ್ಕೃತಿ, ವಿಜ್ಞಾನ, ತಂತ್ರಜ್ಞಾನ ಮತ್ತು ಮಾನವೀಯ ಮೌಲ್ಯಗಳ ಶಿಕ್ಷಣ ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ನೀಡಿದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಹಾಗೂ ನಟಿ ಪವಿತ್ರಾಗೌಡ ಸೇರಿ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಡಿ.3ಕ್ಕೆ ಮುಂದೂಡಿದೆ.
ಸರ್ಕಾರಿಂದ ಮಂಜೂರಾದ ಭೂಮಿಗಳ ಪೋಡಿ ದಾಖಲೆ ದುರಸ್ತಿ ಅಭಿಯಾನ ಶನಿವಾರದಿಂದ ಆರಂಭಿಸಲಾಗುತ್ತಿದ್ದು, ಈ ಕ್ರಮದಿಂದ ರಾಜ್ಯದ 20ರಿಂದ 25 ಲಕ್ಷ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಇತ್ತೀಚೆಗೆ ಸರ್ವೀಸ್ ಅಪಾರ್ಟ್ಮೆಂಟ್ನಲ್ಲಿ ಸ್ನೇಹಿತೆಯ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.