ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರುಪಾಯಿ ಅಕ್ರಮ ವರ್ಗಾವಣೆ ಹಗರಣವನ್ನು ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ವಕ್ಫ್ ಆಸ್ತಿ ವಿವಾದ ಹಾಗೂ ಗುತ್ತಿಗೆಗಳಲ್ಲಿ ಮುಸ್ಲಿಂ ಮೀಸಲಾತಿ ಬೇಡಿಕೆ ಬೆನ್ನಲ್ಲೇ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆಗೆ ಹೊಂದಿರಬೇಕಾಗಿದ್ದ ಷರತ್ತು ಸಡಿಲಿಕೆ ಮಾಡುವ ವಿಧೇಯಕವನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಸರ್ಕಾರ ಸಜ್ಜಾಗಿದೆ.
ಒಳ ಮೀಸಲಾತಿ ಜಾರಿ ಬಗ್ಗೆ ಸೂಕ್ತ ಶಿಫಾರಸು ಸಹಿತ ವರದಿ ಸಲ್ಲಿಸಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.