ಕೇಂದ್ರ ಸಚಿವ ಎಚ್ಡಿಕೆಗೆ ಮೈತ್ರಿ ಕಾರ್ಯಕರ್ತರ ಅಭಿನಂದನೆದಾಬಸ್ಪೇಟೆ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾಬಸ್ಪೇಟೆ ಪಟ್ಟಣದ ಮೂಲಕ ಸಿದ್ದಗಂಗಾ ಮಠಕ್ಕೆ ತೆರಳುವ ವೇಳೆ ಪಟ್ಟಣದ ಉದ್ದಾನೇಶ್ವರ ವೃತ್ತದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿ ಪಟಾಕಿ ಹಚ್ಚಿ, ಸಿಹಿ ತಿನ್ನಿಸಿ ಅಭಿನಂದಿಸಿ ಬೀಳ್ಕೊಟ್ಟರು.