ಸಿಡಿಲ ಮಳೆಗೆ 30ಕ್ಕೂ ಹೆಚ್ಚು ಮರಗಳು ಧರೆಗೆರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಭಾರಿ ಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಿಂದ ಅನೇಕ ತಗ್ಗುಪ್ರದೇಶಗಳು ಜಲಾವೃತಗೊಂಡರೆ, ರಸ್ತೆಗಳು ಅಕ್ಷರಶಃ ನದಿಗಳಾಗಿದ್ದವು. ನಗರದ ಬಹುತೇಕ ಕಡೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡಿದರು.