ಕೇಂದ್ರ ಸರ್ಕಾರದ ಆದೇಶದನ್ವಯ ರಾಜ್ಯದಲ್ಲಿನ ಸರ್ಕಾರಿ ಇಲಾಖೆ, ನಿಗಮ, ಮಂಡಳಿ ಸೇರಿ ಸರ್ಕಾರದ ಇತರ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ 15 ವರ್ಷ ಪೂರ್ಣಗೊಂಡ ವಾಹನಗಳನ್ನು ನಾಶಪಡಿಸುವಂತೆ ಸಾರಿಗೆ ಇಲಾಖೆ ಆದೇಶಿಸಿದೆ.
ನಟ ದರ್ಶನ್ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸುತ್ತಿಲ್ಲ. ಹಾಸಿಗೆ, ದಿಂಬು ಕೊಟ್ಟಿಲ್ಲ ಎಂಬ ಆರೋಪದ ಕುರಿತು ವಿವರಣೆ ನೀಡುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ದೇಶಿಸಿದೆ.
ರಾಜಭವನ, ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಕೆರೆಗಳ ವಿಸ್ತೀರ್ಣಕ್ಕನುಗುಣವಾಗಿ ಬಫರ್ ವಲಯ ಮರು ನಿಗದಿ ಮಾಡುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ರಾಜ್ಯಪಾಲರು, ಅಂಕಿತ ಹಾಕದೇ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಎಂದೇ ಪ್ರಸಿದ್ಧಿ ಪಡೆದಿರುವ ಟೊಮೆಟೋ ಬೆಲೆ ಕುಸಿತದಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಕೆಲ ದಿನಗಳಿಂದ ಭಾರಿ ಬೇಡಿಕೆಯಲ್ಲಿದ್ದ ಟೊಮೆಟೋ ಬೆಳೆಯನ್ನು ಹೆಚ್ಚಿನ ರೈತರು ಬೆಳೆದಿದ್ದಾರೆ.