ಮಕ್ಕಳ ಸರ್ವತೋಮುಖ ಪ್ರಗತಿಗೆ ಹಕ್ಕುಗಳ ಜಾಗೃತಿದೊಡ್ಡಬಳ್ಳಾಪುರ: ಇಲ್ಲಿನ ಯುವ ಸಂಚಲನ ಚಾರಿಟಬಲ್ ಟ್ರಸ್ಟ್ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್ ಸಹಯೋಗದಲ್ಲಿ ನಡೆಯುತ್ತಿರುವ "ಎಲ್ಲಾ ಮಕ್ಕಳಿಗೂ ಎಲ್ಲಾ ಹಕ್ಕುಗಳು " ಹಕ್ಕಿನೊಂದಿಗೆ ಜವಾಬ್ದಾರಿ ಅಭಿಯಾನದ ಮೊದಲ ಹಂತವಾಗಿ ಸೈಕಲ್ ಜಾಗೃತಿ ಕಾರ್ಯಕ್ರಮಕ್ಕೆ ಭಾನುವಾರ ಇಲ್ಲಿನ ತಾಲೂಕು ಕಚೇರಿ ವೃತ್ತದಲ್ಲಿ ಟ್ರಸ್ಟ್ ಅಧ್ಯಕ್ಷ ಚಿದಾನಂದಮೂರ್ತಿ, ಖಜಾಂಚಿ ನವೀನ್ ಮತ್ತು ಸದಸ್ಯ ದಿವಾಕರ್ ಈ ವರ್ಷವಿಡೀ ನಡೆಯಲಿರುವ ಮಹತ್ವದ ಅಭಿಯಾನಕ್ಕೆ ಚಾಲನೆ ನೀಡಿದರು.