ಹಾಲು ಉತ್ಪಾದನೆ ವೆಚ್ಚ ಹೆಚ್ಚಳ ಹಿನ್ನೆಲೆಯಲ್ಲಿ ರೈತರು ಹಾಲಿನ ಖರೀದಿ ದರವನ್ನು 10 ರು.ನಷ್ಟು ಹೆಚ್ಚಿಸುವಂತೆ ಬೇಡಿಕೆ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಿಸುವ ವಿಷಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ರಾಜ್ಯದ ಜನರ ಬೆಚ್ಚಿ ಬೀಳಿಸಿದ್ದ ಬೀದರ್ನಲ್ಲಿ ನಡೆದ ಎಟಿಎಂಗೆ ತುಂಬಲು ತೆಗೆದುಕೊಂಡು ಹೋಗುತ್ತಿದ್ದ ಹಣ ದರೋಡೆ, ಮಂಗಳೂರು ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೂಲಿಬೆಲೆಯಲ್ಲಿ ಬಾಲಿವುಡ್ ಸ್ಟೈಲ್ನಲ್ಲಿ ಎಟಿಎಂ ಕಳ್ಳತನ ನಡೆದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ಸೆಟ್ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಇಬ್ಬರು ಮಹಿಳಾ ಐಪಿಎಸ್ ಅಧಿಕಾರಿಗಳ ನಡುವಿನ ತಿಕ್ಕಾಟ ಮುಂದುವರೆದಿದ್ದು, ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿರುವ ಡಿಐಜಿ ವರ್ತಿಕಾ ಕಟಿಯಾರ್ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಐಜಿಪಿ ಡಿ.ರೂಪಾ ಲಿಖಿತ ದೂರು ನೀಡಿದ್ದಾರೆ.
ರಾಜ್ಯದಲ್ಲಿ ವೃತ್ತಿ ಪರ ತೆರಿಗೆಯನ್ನು ಮಾಸಿಕ 200 ರು.ಗಳಿಂದ 300 ರು.ಗಳಿಗೆ ಹೆಚ್ಚಳ ಮಾಡುವ ಸಲುವಾಗಿ ‘ಕರ್ನಾಟಕ ವೃತ್ತಿ, ಕಸುಬು, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ ತಿದ್ದುಪಡಿ ವಿಧೇಯಕ-2025’ಕ್ಕೆ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.