ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ತೆರೆಯುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸೋಮವಾರ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಂಡವು (ಸಿಎಂಆರ್ಎಸ್) ಈ ಮಾರ್ಗಕ್ಕಾಗಿ ಚೀನಾದ ಸಿಆರ್ಆರ್ಸಿ ಕಂಪನಿ ಪೂರೈಸಿರುವ ಚಾಲಕ ರಹಿತ ರೈಲಿನ ಶಾಸನಬದ್ಧ ತಪಾಸಣೆ ನಡೆಸಿದೆ.
ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಸೇವೆ ನೀಡುತ್ತಿದ್ದ 231 ಶಾಲಾ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಪ್ರಕರಣ ದಾಖಲಿಸಿದ್ದು, 65 ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಬಹುಕೋಟಿ ವಂಚನೆ ಮಾಡಿದ್ದ ಐಎಂಎ (ಐ-ಮಾನಿಟರಿ ಅಡ್ವೈಸರಿ) ಕಂಪನಿಯ ₹534.5 ಕೋಟಿ ಮೌಲ್ಯದ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.
ವಿದ್ಯುತ್ ಸಂಪರ್ಕ ಹಠಾತ್ ಕಡಿತಗೊಂಡ ಪರಿಣಾಮ ಸ್ಕೈವಾಕ್ನ ಲಿಫ್ಟ್ನಲ್ಲಿ ಸಿಲುಕಿ ಆತಂಕಕ್ಕೊಳಗಾಗಿದ್ದ ಮಹಿಳೆಯೊಬ್ಬರನ್ನು ಚಂದ್ರಾಲೇಔಟ್ ಠಾಣೆ ಹೊಯ್ಸಳ ಸಿಬ್ಬಂದಿ ರಕ್ಷಿಸಿರುವ ಘಟನೆ ನಡೆದಿದೆ.
ಪತ್ನಿ ನಡತೆ ಬಗ್ಗೆ ಸಾರ್ವಜನಿಕರ ಮುಂದೆ ಕೀಳಾಗಿ ಮಾತನಾಡಿದವನನ್ನು ಚಾಕುವಿನಿಂದ ಚುಚ್ಚಿ ಕೊಲೆಗೈದ ಪ್ರಕರಣದಲ್ಲಿ ಪತಿ ಜೀವನವಿಡೀ ಜೈಲಿನಲ್ಲಿ ಕೊಳೆಯುವ ಪರಿಸ್ಥಿತಿಯಿಂದ ಹೈಕೋರ್ಟ್ ಪಾರು ಮಾಡಿದೆ.
ಗ್ಯಾರಂಟಿ ಯೋಜನೆಗಳಿಗೆ ಆದಾಯ ಹೊಂದಿಸಲು ರಾಜ್ಯ ಸರ್ಕಾರ, ನಿಗಮಗಳಿಗೆ ಹಂಚಿಕೆ ಮಾಡಲಾದ ಅನುದಾನ ಕಡಿತಗೊಳಿಸಿದೆ.
ಸರ್ಕಾರಿ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜು ವಿದ್ಯಾರ್ಥಿಗಳಿಗೆ ಅವರ ವ್ಯಾಸಂಗದ ಅವಧಿಯಲ್ಲೇ ಭವಿಷ್ಯದ ಉದ್ಯೋಗಾವಕಾಶಕ್ಕೆ ಪೂರಕವಾಗಿ ವಿಸ್ತೃತ ಕೌಶಲ್ಯ ತರಬೇತಿ ನೀಡಲು ರಾಜ್ಯ ಸರ್ಕಾರ ರಾಜ್ಯದ ವಿವಿಧ ಭಾಗಗಳಲ್ಲಿ ‘ಏಳು ಸೆಂಟರ್ಸ್ ಆಫ್ ಎಕ್ಸಲೆನ್ಸ್’ ಆರಂಭಿಸಲು ಯೋಜನೆ ರೂಪಿಸಿದೆ.
ರಾಜ್ಯ ಸರ್ಕಾರ ಸಾರಿಗೆ ನೌಕರರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರ ಕನ್ನಡ ಕೃಷಿ ಪ್ರತಿಷ್ಠಾನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದೆ.