ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿರುಗೇಟು ನೀಡಿದ್ದಾರೆ.
ನವದೆಹಲಿ: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿರುಗೇಟು ನೀಡಿದ್ದಾರೆ.
ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ‘ರಾಜ್ಯದಲ್ಲಿನ ದುರಾಡಳಿತವನ್ನು ಮರೆಮಾಚಲು ಕಾಂಗ್ರೆಸ್ನ ಹಲವಾರು ನಾಟಕಗಳು. 1. ಜಾತಿ ಸರ್ವೇ, 2. ಗ್ರೇಟರ್ ಬೆಂಗಳೂರು, 3. ಮಂತ್ರಿಮಂಡಲ ವಿಸ್ತಾರ, 4. ಮುಖ್ಯಮಂತ್ರಿ ಬದಲಾವಣೆ, ಈಗ ಆರೆಸ್ಸೆಸ್ ನಿಷೇಧ’ ಎಂದು ಪರೋಕ್ಷವಾಗಿ ಖರ್ಗೆ ವಿರುದ್ಧ ಹರಿಹಾಯ್ದಿದ್ದಾರೆ.
