ಸಾರಾಂಶ
ನಗರದ ಕಂಟೋನ್ಮೆಂಟ್ ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಆಗುತ್ತಿರುವುದರಿಂದ ನಾಲ್ಕು ರೈಲುಗಳ ಮಾರ್ಗ ಬದಲಾಯಿಸಲಾಗಿದ್ದು, ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆ ಆಗುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ಬೆಂಗಳೂರು : ನಗರದ ಕಂಟೋನ್ಮೆಂಟ್ ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಆಗುತ್ತಿರುವುದರಿಂದ ನಾಲ್ಕು ರೈಲುಗಳ ಮಾರ್ಗ ಬದಲಾಯಿಸಲಾಗಿದ್ದು, ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆ ಆಗುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ಮೈಸೂರು – ಎಸ್ಎಂವಿಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲು (06269) ಜೂನ್ 23, 25 ಮತ್ತು 26ರಂದು ಹೊರಡುವ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಮತ್ತು ಎಸ್.ಎಂ.ವಿ.ಟಿ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದೆ.
ಕೆಎಸ್ಆರ್ ಬೆಂಗಳೂರು – ನಾಂದೇಡ್ ದೈನಂದಿನ ಎಕ್ಸ್ಪ್ರೆಸ್ ರೈಲು (16593) ಜೂನ್ 23, 25 ಮತ್ತು 26, 2025 ರಂದು ಕೆಎಸ್ಆರ್ ಬೆಂಗಳೂರಿನಿಂದ 45 ನಿಮಿಷಗಳ ಕಾಲ ವಿಳಂಬವಾಗಿ ಹೊರಡಲಿದೆ. ಅಲ್ಲದೆ, ಇದು ಕೆ.ಎಸ್.ಆರ್ ಬೆಂಗಳೂರು, ಯಶವಂತಪುರ, ಯಲಹಂಕ, ಮತ್ತು ಧರ್ಮಾವರಂ ಮಾರ್ಗವಾಗಿ ಸಂಚರಿಸಲಿದೆ.
ಮೈಸೂರು – ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ದೈನಂದಿನ ಎಕ್ಸ್ಪ್ರೆಸ್ (16022) ಜೂನ್ 23, 25 ಮತ್ತು 26, 2025 ರಂದು ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಬೈಯಪ್ಪನಹಳ್ಳಿ, ಮತ್ತು ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದೆ.
ಎಸ್ಎಂವಿಟಿ ಬೆಂಗಳೂರು – ಮೈಸೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲು (06270) ಜೂನ್ 23, 25 ಮತ್ತು 26, 2025 ರಂದು ಎಸ್.ಎಂ.ವಿ.ಟಿ ಬೆಂಗಳೂರು, ಬಾಣಸವಾಡಿ, ಯಶವಂತಪುರ, ಮತ್ತು ಕೆ.ಎಸ್.ಆರ್ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದೆ.