ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚಿಲಂಪಾಡಿ

| Published : Feb 26 2025, 01:06 AM IST

ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚಿಲಂಪಾಡಿ
Share this Article
  • FB
  • TW
  • Linkdin
  • Email

ಸಾರಾಂಶ

ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ) ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ) ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.

ಕಳೆದ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಭಾಸ್ಕರ ಗೌಡ ಈ ಬಾರಿಯ ಆಡಳಿತದ ಮೊದಲ ಅವಧಿಗೆ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಕಳೆದ ಬಾರಿ ನಿರ್ದೇಶಕರಾಗಿದ್ದ ಪ್ರವೀಣ್ ರೈ ಪಂಜೊಟ್ಟು ಆಯ್ಕೆಯಾಗಿದ್ದಾರೆ.

ಆಯ್ಕೆ ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಭಾಸ್ಕರ ಗೌಡ ಇಚಿಲಂಪಾಡಿ, ಕಳೆದ ೫ ವರ್ಷಗಳ ಹಿಂದೆ ಸುಮಾರು ರು. ೨ ಕೋಟಿಗೂ ಅಧಿಕ ನಷ್ಟದಲ್ಲಿದ್ದ ಬ್ಯಾಂಕ್ ಈಗ ರು. ೩೯ ಲಕ್ಷ ಲಾಭದಲ್ಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ೩೩ ಗ್ರಾಮಗಳು ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ೩೫ ಗ್ರಾಮಗಳ ವ್ಯಾಪ್ತಿ ಹೊಂದಿರುವ ಈ ಭೂ ಅಭಿವೃದ್ಧಿ ಬ್ಯಾಂಕ್‌ನಲ್ಲಿ ಹಿಂದೆ ರು. ೪ ಕೋಟಿಗೂ ಅಧಿಕ ಹೆಚ್ಚು ಸಾಲ ಸುಸ್ತಿಯಾಗಿತ್ತು. ಅದನ್ನು ಸುಮಾರು ರು. ೧.೬೮ ಕೋಟಿಗೆ ತಂದು ನಿಲ್ಲಿಸಿದ್ದೇವೆ ಎಂದರು.ಬಿಜೆಪಿ ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸಹಕಾರ ಭಾರತಿಯ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಗ್ರಾಮಾಂತರ ಮಂಡಲ ಕಾರ್ಯದರ್ಶಿ ಉಮೇಶ್ ಗೌಡ ಕೋಡಿಬೈಲ್, ಮೋಹನ್ ಪಕ್ಕಳ, ಹರೀಶ್ ಬಿಜತ್ರೆ, ವಿದ್ಯಾಧರ್ ಜೈನ್ ಉಪ್ಪಿನಂಗಡಿ, ಬ್ಯಾಂಕ್ ನಿರ್ದೇಶಕರಾದ ಸುಜಾತ ರೈ ಬಲ್ನಾಡು, ಸುಂದರ ಪೂಜಾರಿ ಬಡಾವು, ಕುಶಾಲಪ್ಪ ಗೌಡ ಅನಿಲ, ಯತೀಂದ್ರ ಕೊಚ್ಚಿ, ವಿಕ್ರಮ್ ರೈ ಸಾಂತ್ಯ, ಚಂದ್ರಾವತಿ ಅಭಿಕಾರ್, ರಾಜುಮೋನು ಕುಟ್ರುಪ್ಪಾಡಿ, ಚೆನ್ನಕೇಶವ ಕೊಂಬಾರು, ಬಾಬು ಮುಗೇರ ನರಿಮೊಗ್ರು, ನಾರಾಯಣ ನಾಯ್ಕ್ ಕೊಯ್ಲ, ಯುವರಾಜ ಪೆರಿಯತ್ತೋಡಿ, ಸ್ವಾತಿ ರೈ ಆರ್ತಿಲ, ಬ್ಯಾಂಕ್‌ನ ಕಾರ್ಯನಿರ್ವಹಣಾಧಿಕಾರಿ ಶೇಖರ್ ಮತ್ತಿತರರು ಇದ್ದರು.