ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಕಸಕೊಪ್ಪ ಗ್ರಾಮದಲ್ಲಿ ಸುಮಾರು ₹ 1.50 ಕೋಟಿ ವೆಚ್ಚದ ನೂತನ ಪಂಚರಾಶಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭೂಮಿ ಪೂಜೆ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಕಸಕೊಪ್ಪ ಗ್ರಾಮದಲ್ಲಿ ಸುಮಾರು ₹ 1.50 ಕೋಟಿ ವೆಚ್ಚದ ನೂತನ ಪಂಚರಾಶಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭೂಮಿ ಪೂಜೆ ನೆರವೇರಿಸಿದರು.ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕಾಮಗಾರಿಯ ಗುಣಮಟ್ಟ ಕಾಪಾಡುವಂತೆ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದೇನೆ. ಈ ಭವನ ನಿರ್ಮಾಣದಿಂದ ಗ್ರಾಮದ ಅಭಿವೃದ್ಧಿಗೆ ಹೊಸ ಆಯಾಮ ದೊರೆಯಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷ ಯುವರಾಜ್ ಕದಂ, ಬಾಹುಕು ಮಾಸೆಕರ್, ಬಾಳು ದೇಸೂರಕರ್, ಮನೋಹರ್ ಬೆಳಗಾಂವ್ಕರ್, ಮಹೇಶ ಪಾಟೀಲ, ನಿಂಗಪ್ಪ ಮೋರೆ, ಡಾಕಲು ಪಾಟೀಲ, ಶಿವಾಜಿ ಬೊಕಡೆ, ಲಕ್ಷ್ಮೀ ಪಾಟೀಲ, ಪೂಜಾ ಸುತಾರ, ಗಾಯತ್ರಿ ಸುತಾರ, ಕಾಶೀನಾಥ ಮೋರೆ, ಮಂಜುಳಾ ಕಾಂಬಳೆ, ಶ್ರೀಕಾಂತ ಪಾಟೀಲ, ಜಯವಂತ ಮೋರೆ, ಪರಶುರಾಮ ಕಿಣೇಕರ್, ಅರುಣ ಪಾಟೀಲ, ಗುಂಡು ಪಾಟೀಲ, ಡಿ.ಎಚ್.ಮಾಳಗಿ, ರವಿಕಾಂತ ಪಿಡಿಒ ಉಪಸ್ಥಿತರಿದ್ದರು.