ಸಚಿನ ಪಂಚಾಳ ಸಾವಿನ ಸುತ್ತ ಈಗ ರಾಜಕೀಯ ಕೆಸರೆರಚಾಟ ನಡೆಯುತ್ತಿದ್ದು, ಇದು ಸತ್ತ ವ್ಯಕ್ತಿಗೆ ಮಾಡುವ ಅವಮಾನ ಎಂದು ವಿಶ್ವಕರ್ಮ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ವಿಜಯಕುಮಾರ ಪತ್ತಾರ ಅಸಮಧಾನ ವ್ಯಕ್ತಪಡಿಸಿದರು.
ಕೋಟ್ಯಂತರ ರು. ವ್ಯವಹಾರ ನಡೆಸುತ್ತಿದ್ದರೂ ಮದ್ಯ ಸೇವನೆ, ಊಟದ ಖರ್ಚಿಗಾಗಿ ಕೇವಲ 1500ರು. ಗಳನ್ನು ಫೋನ್ ಪೇ ಮೂಲಕ ಪಡೆದಿದ್ದ ಗುತ್ತಿಗೆದಾರ ಸಚಿನ ಪಂಚಾಳ ಸಾವಿನ ನಿಗೂಢತೆ ಮತ್ತಷ್ಟು ಹೆಚ್ಚಿದ್ದು, ರೆಸ್ಟೋರಂಟ್ನಲ್ಲಿನ ಸಿಸಿಟಿವಿ ದೃಶ್ಯಾವಳಿ ಬೆಳಕಿಗೆ ಬಂದಿವೆ.
ಆಂದೋಲಾ ಸ್ಚಾಮೀಜಿ, ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಮುಖಂಡರಾದ ಚಂದು ಪಾಟೀಲ್, ಮಣಿಕಂಠ ರಾಠೋಡ ಕೊಲೆಗೆ ಸಂಚು ರೂಪಿಸಿ ಮಹಾರಾಷ್ಟ್ರ ಮೂಲದ ಗುಂಡಾಗಳಿಗೆ ಸುಪಾರಿ ಕೊಟ್ಟಿದ್ದಾರೆ ಎಂದು ಎಂಎಲ್ಸಿ ರವಿಕುಮಾರ್ ಆರೋಪಿಸಿದ್ದಾರೆ.