ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಚಿರತೆಯೊಂದಕ್ಕೆ ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಬೈಕ್ ಸವಾರ ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಚಿರತೆ ಅಡ್ಡ ಬಂದಿದೆ.
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಚಿರತೆಯೊಂದಕ್ಕೆ ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಬೈಕ್ ಸವಾರ ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಚಿರತೆ ಅಡ್ಡ ಬಂದಿದೆ. ಇದರಿಂದ ನಿಯಂತ್ರಣ ತಪ್ಪಿದ ಬೈಕ್ ಸವಾರ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ತೀವ್ರ ಗಾಯಗೊಂಡ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ್ದು. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.